ವಿಟ್ಲ: ಸಾಲೆತ್ತೂರು ಕೊಡಂಗೆಯ ಚೆಕ್ಪೋಸ್ಟ್ನಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದ ‘ಡಿ ಗ್ಯಾಂಗ್’ ಮುಖ್ಯಸ್ಥ ಸೇರಿದಂತೆ ನಾಲ್ಕು ಮಂದಿಯನ್ನು ಪೆರಾಜೆ ಗ್ರಾಮದ ಬುಡೋಳಿಯಲ್ಲಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಾರದ ಹಿಂದೆ ಕೇರಳದಲ್ಲಿ ಬಾರೊಂದರಲ್ಲಿ ಘರ್ಷಣೆ ನಡೆಸಿ, ಬೆನ್ನಟ್ಟಿದ ಪೊಲೀಸರ ಮೇಲೆಯೂ ಗುಂಡಿನ ದಾಳಿ ನಡೆಸಿದ ‘ಡಿ’ ಗ್ಯಾಂಗ್ ಅನ್ನು ಸಾಲೆತ್ತೂರು ಚೆಕ್ಪೋಸ್ಟ್ನಲ್ಲಿ ವಿಟ್ಲ ಪೊಲೀಸರು ತಡೆದಿದ್ದರು. ಆಗ ಅವರ ಮೇಲೆಯೂ ಗುಂಡು ಹಾರಿಸಿದ್ದರು. ಆಗ ಕೇರಳದ ಮಂಜೇಶ್ವರ ಮಂಗಲ್ಪಾಡಿ ಬೈತಿಲ ನಿವಾಸಿ ಅಬ್ದುಲ್ ಲತೀಫ್ ಯಾನೆ ಲತ್ತಿ ಯಾನೆ ಲತೀಫ್ (23), ಮೀಂಜ ಮೀಯಪದವು ಬೆಚ್ಚಂಗಳ ನಿವಾಸಿ ಮಹಮ್ಮದ್ ಶಾಕೀರ್ ಯಾನೆ ಶಾಕೀರ್ (26), ಮೂಡಂಬೈಲು ಅಡ್ಕಂತಗುರಿ ನಿವಾಸಿ ಮಹಮ್ಮದ್ ಅಶ್ವಕ್ ಯಾನೆ ಅಸ್ಪಾಕ್ನನ್ನು (25) ಬಂಧಿಸಲಾಗಿತ್ತು. ಉಳಿದವರು ಪರಾರಿಯಾಗಿದ್ದರು.
ಈಗ ಬಂಧಿತರಿಂದ 7.65 ಎಂಎಂ ಪಿಸ್ತೂಲ್ 3, ನಾಡಕೋವಿ 1, ಸಜೀವ ಮದ್ದುಗುಂಡು 13 ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್, ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ, ಎಎಸ್ಐ ಕರುಣಾಕರ್, ಸಿಬ್ಬಂದಿ ಪ್ರಸನ್ನ, ಗಿರೀಶ್, ಪ್ರತಾಪ, ವಿನಾಯಕ, ಲೋಕೇಶ್, ಹೇಮರಾಜ್, ನಝೀರ್, ವಿವೇಕ್, ಪ್ರವೀಣ್ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.