‘ರಾಜೇಶ್ ಭಟ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದರು. ಆರೋಪಿಯು ಆಕೆಗೆ ಜೀವ ಬೆದರಿಕೆ ಹಾಕಿದ್ದಲ್ಲದೆ, ಈ ವಿಚಾರವನ್ನು ಮುಕ್ತಾಯಗೊಳಿಸುವಂತೆ ಒತ್ತಾಯಪೂರ್ವಕವಾಗಿ ಮಂಗಳೂರಿನ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಹೆಸರಲ್ಲಿ ಪತ್ರ ಬರೆಯಿಸಿಕೊಂಡು, ಸಹಿ ಪಡೆದಿದ್ದಾನೆ. ಸಾಕ್ಷಿದಾರರಿಂದ ಕೂಡ ಒತ್ತಾಯದಿಂದ ಪತ್ರಕ್ಕೆ ಸಹಿ ಪಡೆದಿದ್ದಾನೆ’ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.