<p><strong>ಮಂಗಳೂರು:</strong> ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.</p>.<p>ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ರಾಜೇಶ್ ಭಟ್ ಅವರು ಕರಂಗಲ್ಪಾಡಿಯಲ್ಲಿರುವ ತಮ್ಮ ಕಚೇರಿಯಲ್ಲಿ, ತರಬೇತಿಗಾಗಿ ಸೇರಿದ್ದ ತನ್ನನ್ನು ಸೆ.25ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಅಕ್ಟೋಬರ್ 18ರಂದು ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದರು.</p>.<p>‘ರಾಜೇಶ್ ಭಟ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದರು. ಆರೋಪಿಯು ಆಕೆಗೆ ಜೀವ ಬೆದರಿಕೆ ಹಾಕಿದ್ದಲ್ಲದೆ, ಈ ವಿಚಾರವನ್ನು ಮುಕ್ತಾಯಗೊಳಿಸುವಂತೆ ಒತ್ತಾಯಪೂರ್ವಕವಾಗಿ ಮಂಗಳೂರಿನ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಹೆಸರಲ್ಲಿ ಪತ್ರ ಬರೆಯಿಸಿಕೊಂಡು, ಸಹಿ ಪಡೆದಿದ್ದಾನೆ. ಸಾಕ್ಷಿದಾರರಿಂದ ಕೂಡ ಒತ್ತಾಯದಿಂದ ಪತ್ರಕ್ಕೆ ಸಹಿ ಪಡೆದಿದ್ದಾನೆ’ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.</p>.<p>‘ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡಿದ್ದು, ಈತನಿಗೆ ಎರಡನೇ ಆರೋಪಿ ಅನಂತ ಭಟ್, ಮೂರನೇ ಆರೋಪಿ ಅಚ್ಯುತ್ ಭಟ್ ನೆರವು ನೀಡಿದ್ದಾರೆ. ಮೂವರು ಕೂಡ ಶಿಕ್ಷಾರ್ಹ ಅಪರಾಧವೆಸಗಿದ್ದಾರೆ’ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಪ್ರಕರಣದ ತನಿಖೆಯನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅವರ ವರ್ಗಾವಣೆ ನಂತರ ಬಂದ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.</p>.<p>ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ರಾಜೇಶ್ ಭಟ್ ಅವರು ಕರಂಗಲ್ಪಾಡಿಯಲ್ಲಿರುವ ತಮ್ಮ ಕಚೇರಿಯಲ್ಲಿ, ತರಬೇತಿಗಾಗಿ ಸೇರಿದ್ದ ತನ್ನನ್ನು ಸೆ.25ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಅಕ್ಟೋಬರ್ 18ರಂದು ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದರು.</p>.<p>‘ರಾಜೇಶ್ ಭಟ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದರು. ಆರೋಪಿಯು ಆಕೆಗೆ ಜೀವ ಬೆದರಿಕೆ ಹಾಕಿದ್ದಲ್ಲದೆ, ಈ ವಿಚಾರವನ್ನು ಮುಕ್ತಾಯಗೊಳಿಸುವಂತೆ ಒತ್ತಾಯಪೂರ್ವಕವಾಗಿ ಮಂಗಳೂರಿನ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಹೆಸರಲ್ಲಿ ಪತ್ರ ಬರೆಯಿಸಿಕೊಂಡು, ಸಹಿ ಪಡೆದಿದ್ದಾನೆ. ಸಾಕ್ಷಿದಾರರಿಂದ ಕೂಡ ಒತ್ತಾಯದಿಂದ ಪತ್ರಕ್ಕೆ ಸಹಿ ಪಡೆದಿದ್ದಾನೆ’ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.</p>.<p>‘ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡಿದ್ದು, ಈತನಿಗೆ ಎರಡನೇ ಆರೋಪಿ ಅನಂತ ಭಟ್, ಮೂರನೇ ಆರೋಪಿ ಅಚ್ಯುತ್ ಭಟ್ ನೆರವು ನೀಡಿದ್ದಾರೆ. ಮೂವರು ಕೂಡ ಶಿಕ್ಷಾರ್ಹ ಅಪರಾಧವೆಸಗಿದ್ದಾರೆ’ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಪ್ರಕರಣದ ತನಿಖೆಯನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅವರ ವರ್ಗಾವಣೆ ನಂತರ ಬಂದ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>