<p><strong>ಮಂಗಳೂರು:</strong> ಮಾರ್ಗಮಧ್ಯೆ ಕಾರು ಕೆಟ್ಟುಹೋಗಿ ಪರದಾಡುತ್ತಿದ್ದ ಗರ್ಭಿಣಿಯೊಬ್ಬರನ್ನು ಪೊಲೀಸ್ ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸುವ ಮೂಲಕ ಎಎಸ್ಐ ಹರೀಶ್ ಮತ್ತು ವಿಜಯ್ಕುಮಾರ್ ವಿ. ಮಾನವೀಯತೆ ಮೆರೆದಿದ್ದಾರೆ.</p>.<p>ಮಹಿಳೆಯು ಹೆರಿಗೆಗೆಂದು ವಿಟ್ಲದಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ, ಆರ್ಕುಳ ಪೊಲೀಸ್ ಚೆಕ್ ಪೋಸ್ಟ್ ಬಳಿ ಅವರ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಎಎಸ್ಐ ಹರೀಶ್ ಮತ್ತು ವಿಜಯ್ಕುಮಾರ್ ವಿ. ಅವರು ತಮ್ಮ ಇಲಾಖೆ ವಾಹನದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯ ಪತಿ ಸಿದ್ದಿಕ್ ಅವರು, ಸುಸೂತ್ರ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಪೊಲೀಸರು ನೀಡಿದ ನೆರವನ್ನು ಮರೆಯಲು ಸಾಧ್ಯವಿಲ್ಲ. ಸಕಾಲಕ್ಕೆ ಆಸ್ಪತ್ರೆಗೆ ತಲುಪಿಸಿದ್ದರಿಂದ ಸುಸೂತ್ರ ಹೆರಿಗೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>ಇನ್ನು ಇವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.<br />ಹರೀಶ್ ಅವರು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಮತ್ತು ವಿಜಯ್ ಕುಮಾರ್ ಅವರು ಕಾನ್ ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಾರ್ಗಮಧ್ಯೆ ಕಾರು ಕೆಟ್ಟುಹೋಗಿ ಪರದಾಡುತ್ತಿದ್ದ ಗರ್ಭಿಣಿಯೊಬ್ಬರನ್ನು ಪೊಲೀಸ್ ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸುವ ಮೂಲಕ ಎಎಸ್ಐ ಹರೀಶ್ ಮತ್ತು ವಿಜಯ್ಕುಮಾರ್ ವಿ. ಮಾನವೀಯತೆ ಮೆರೆದಿದ್ದಾರೆ.</p>.<p>ಮಹಿಳೆಯು ಹೆರಿಗೆಗೆಂದು ವಿಟ್ಲದಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ, ಆರ್ಕುಳ ಪೊಲೀಸ್ ಚೆಕ್ ಪೋಸ್ಟ್ ಬಳಿ ಅವರ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಎಎಸ್ಐ ಹರೀಶ್ ಮತ್ತು ವಿಜಯ್ಕುಮಾರ್ ವಿ. ಅವರು ತಮ್ಮ ಇಲಾಖೆ ವಾಹನದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯ ಪತಿ ಸಿದ್ದಿಕ್ ಅವರು, ಸುಸೂತ್ರ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಪೊಲೀಸರು ನೀಡಿದ ನೆರವನ್ನು ಮರೆಯಲು ಸಾಧ್ಯವಿಲ್ಲ. ಸಕಾಲಕ್ಕೆ ಆಸ್ಪತ್ರೆಗೆ ತಲುಪಿಸಿದ್ದರಿಂದ ಸುಸೂತ್ರ ಹೆರಿಗೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>ಇನ್ನು ಇವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.<br />ಹರೀಶ್ ಅವರು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಮತ್ತು ವಿಜಯ್ ಕುಮಾರ್ ಅವರು ಕಾನ್ ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>