ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಕೆಟ್ಟು ಗರ್ಭಿಣಿ ಪರದಾಟ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪೊಲೀಸರು

Last Updated 26 ಏಪ್ರಿಲ್ 2021, 7:57 IST
ಅಕ್ಷರ ಗಾತ್ರ

ಮಂಗಳೂರು: ಮಾರ್ಗಮಧ್ಯೆ ಕಾರು ಕೆಟ್ಟುಹೋಗಿ ಪರದಾಡುತ್ತಿದ್ದ ಗರ್ಭಿಣಿಯೊಬ್ಬರನ್ನು ಪೊಲೀಸ್ ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸುವ ಮೂಲಕ ಎಎಸ್ಐ ಹರೀಶ್ ಮತ್ತು ವಿಜಯ್‌ಕುಮಾರ್ ವಿ. ಮಾನವೀಯತೆ ಮೆರೆದಿದ್ದಾರೆ.

ಮಹಿಳೆಯು ಹೆರಿಗೆಗೆಂದು ವಿಟ್ಲದಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ, ಆರ್ಕುಳ ಪೊಲೀಸ್ ಚೆಕ್ ಪೋಸ್ಟ್ ಬಳಿ ಅವರ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಎಎಸ್ಐ ಹರೀಶ್ ಮತ್ತು ವಿಜಯ್‌ಕುಮಾರ್ ವಿ. ಅವರು ತಮ್ಮ ಇಲಾಖೆ ವಾಹನದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯ ಪತಿ ಸಿದ್ದಿಕ್ ಅವರು, ಸುಸೂತ್ರ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಪೊಲೀಸರು ನೀಡಿದ ನೆರವನ್ನು ಮರೆಯಲು ಸಾಧ್ಯವಿಲ್ಲ. ಸಕಾಲಕ್ಕೆ ಆಸ್ಪತ್ರೆಗೆ ತಲುಪಿಸಿದ್ದರಿಂದ ಸುಸೂತ್ರ ಹೆರಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಇವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಹರೀಶ್ ಅವರು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಮತ್ತು ವಿಜಯ್ ಕುಮಾರ್ ಅವರು ಕಾನ್ ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT