ಮಂಗಳೂರು: ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ, ಏಳು ಜನರು ವಶಕ್ಕೆ

ಮಂಗಳೂರು: ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ.
ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಏಳು ಜನ ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ.
ಮೊಹಮ್ಮದ್ ರಫೀಕ್, ಮೊಹಮ್ಮದ್ ಬಿಲಾಲ್, ಮೊಹಮ್ಮದ್ ರಫೀಕ್ ಉಳ್ಳಾಲ, ಅಬ್ಬಾಸ್ ಕಿನ್ಯಾ, ಅಕ್ಬರ್ ಸಿದ್ದೀಕ್, ಕಂದಹಾರ ಕಬೀರ, ಬದ್ರ ಮುನೀರ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲದಿನಗಳ ದೇಶದಲ್ಲಿ ಪಿಎಫ್ ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಆ ವೇಳೆ ಕೆಲ ಮುಖಂಡರ ಮನೆ ಮೇಲೆ ದಾಳಿ ನಡೆದಿತ್ತು. ಈಗ ಮತ್ತೊಮ್ಮೆ ಪೊಲೀಸರು ಕಾರ್ಯಚಾರಣೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.