ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ ಕದ್ದ ಆರೋಪಿ ಬಂಧನ

Last Updated 20 ಆಗಸ್ಟ್ 2020, 7:14 IST
ಅಕ್ಷರ ಗಾತ್ರ

ಮಂಗಳೂರು: ಒಬ್ಬಂಟಿ ವೃದ್ಧೆಯ ಚಿನ್ನಾಭರಣ ದೋಚಿದ್ದ ರಿಕ್ಷಾ ಚಾಲಕ ಪ್ರವೀಣ್‌ನನ್ನು ಬಂಧಿಸಿರುವ ಉರ್ವ ಠಾಣೆ ಪೊಲೀಸರು, ಆರೋಪಿಯಿಂದ ₹4.32 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಚಿಲಿಂಬಿ ಪಂಚಲಿಂಗೇಶ್ವರ ದೇವಸ್ಥಾನ ಬಳಿ ವಾಸವಾಗಿರುವ ವೃದ್ಧೆ ಫಿಲೋಮಿನಾ ಸಲ್ಡಾನ ಅವರಿಗೆ ಸಹಾಯ ಮಾಡುತ್ತಿದ್ದ ರಿಕ್ಷಾ ಚಾಲಕ ಪ್ರವೀಣ್‌, ಚಿನ್ನಾಭರಣ ಕಳವು ಮಾಡಿದ್ದ. ಈ ಬಗ್ಗೆ ಜೂನ್‌ 6 ರಂದು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ಫಳ್ನೀರ್‌ನ ಬ್ಯಾಂಕ್‌ನಲ್ಲಿ ಅಡಮಾನ ಇರಿಸಿದ್ದ ಹಾಗೂ ಆತನ ವಶದಲ್ಲಿದ್ದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಉರ್ವ ಠಾಣೆ ಇನ್‌ಸ್ಪೆಕ್ಟರ್‌ ಮಹಮ್ಮದ್ ಶರೀಫ್‌, ಸಬ್ ಇನ್‌ಸ್ಪೆಕ್ಟರ್‌ ಶ್ರೀಕಲಾ, ಎಎಸ್‌ಐ ಬಾಲಕೃಷ್ಣ, ಸಿಬ್ಬಂದಿ ಪ್ರಕಾಶ್‌, ಬಸವರಾಜ ಬಿರಾದಾರ ಅವರ ತಂಡ ಈ ಪ್ರಕರಣ ಭೇದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT