ಈ ವಿಡಿಯೊ ತುಣುಕುಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಗುಲ್ಬರ್ಗ ಸೇರಿದಂತೆ ವಿವಿಧ ನಗರಗಳ ಪೊಲೀಸರ ಜೊತೆ ಹಂಚಿಕೊಂಡಿರುವ ಕಮಿಷನರ್, ಗಲಭೆ ನಡೆಸಿದವರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಆರೋಪಿಗಳ ಗುರುತು ಪತ್ತೆ ಮಾಡಲು ಸಹಕರಿಸುವವರಿಗೆ ಬಹುಮಾನ ನೀಡುವುದಾಗಿಯೂ ತಿಳಿಸಿದ್ದಾರೆ.