ತ್ವರಿತಗತಿಯಲ್ಲಿ ತನಿಖೆ ಆರಂಭಿ ಸಿದ ಮಂಗಳೂರು ಉತ್ತರ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಬಿ., ಸಬ್ ಇನ್ಸ್ಪೆಕ್ಟರ್ಗಳಾದ ಗುರುಕಾಂತಿ, ನಾಗರಾಜ್, ಹೆಡ್ ಕಾನ್ಸ್ಟೆಬಲ್ ಭರತ್, ವೆಲೆಂಟೈನ್ ಡಿಸೋಜ, ಕಾನ್ಸ್ಟೆಬಲ್ ತಿಪ್ಪರಡ್ಡೆಪ್ಪ ಅವರನ್ನು ಒಳಗೊಂಡ ತಂಡ ಸಂಜೆ 6.45 ಕ್ಕೆ ನಗರದ ಲಾಡ್ಜ್ನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ. ಮೊಹ್ಮದ್ ಸುಹೈಲ್, ಮೊಹಮ್ಮದ್ ಸರ್ಫರಾಜ್, ಮೊಹಮ್ಮದ್ ಸಫ್ವಾನ್ ಬಂಧಿತ ಆರೋಪಿಗಳು. ಮೊಹ್ಮದ್ ಸರ್ಫರಾಜ್ ವಿರುದ್ಧ ಈಗಾಗಲೇ ಎರಡು ಕಳವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ ಎರಡು ಬೈಕ್ ವಶಕ್ಕೆ ಪಡೆಯಲಾಗಿದ್ದು, ಆ ಬೈಕ್ಗಳ ಮಾಲೀಕತ್ವದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ಕುಮಾರ್ ವಿಕಾಸ್ ತಿಳಿಸಿದ್ದಾರೆ.