ವಿಟ್ಲ: ಅನಂತಾಡಿ ಗ್ರಾಮದಬಂಟ್ರಂಜ ಎಂಬಲ್ಲಿ ಸೀರೆಯ ಜೋಕಾಲಿ ಕುತ್ತಿಗೆಗೆ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ.
ಬಂದ್ರಿಂಜ ಮನೆಯ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ, ಬಾಬನಕಟ್ಟೆ ಸರ್ಕಾರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಲಿಖಿತಾ (11) ಮೃತ ಬಾಲಕಿ.
ಸೀರೆಯಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಬಾಲಕಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸಿಲುಕಿಕೊಂಡಿದೆ. ಈ ಸಂದರ್ಭ ಬಾಲಕಿಯ ತಾಯಿ ದಿನಸಿ ಸಾಮಾನು ತರಲು ಅಂಗಡಿಗೆ ಹೋಗಿದ್ದು, ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.