<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 7.96ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಒಟ್ಟು 832 ಜನರಿಗೆ ಕೋವಿಡ್–19 ದೃಢವಾಗಿದ್ದು, 552 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ 16 ಮಂದಿಗೆ ಕೋವಿಡ್–19 ಇರುವುದು ಶನಿವಾರ ದೃಢಪಟ್ಟಿದ್ದು, ಸಾವಿನ ಸಂಖ್ಯೆ 1,040ಕ್ಕೆ ಏರಿದೆ.</p>.<p><strong>ಉಡುಪಿ: </strong>ಜಿಲ್ಲೆಯಲ್ಲಿ 174 ಮಂದಿಗೆ ಕೋವಿಡ್–19 ದೃಢವಾಗಿದ್ದು, 454 ಜನರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,885 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟ ಇಬ್ಬರಿಗೆ ಕೋವಿಡ್ ಇರುವುದು ಶನಿವಾರ ಖಚಿತವಾಗಿದೆ.</p>.<p><strong>ಕಾಸರಗೋಡು: </strong>ಜಿಲ್ಲೆಯಲ್ಲಿ ಶನಿವಾರ 493 ಮಂದಿಗೆ ಸೋಂಕು ದೃಢಪಟ್ಟಿದ್ದು, 539 ಮಂದಿ ಗುಣಮುಖರಾಗಿದ್ದಾರೆ. 3,459 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 79,866 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 75,759 ಮಂದಿ ಗುಣಮುಖರಾಗಿದ್ದಾರೆ.</p>.<p class="Subhead"><strong>ಕ್ರೀಡಾಪಟುಗಳಿಗೆ ನಾಳೆ ಲಸಿಕೆ:</strong> ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಲಸಿಕಾ ಶಿಬಿರವನ್ನು ಜೂ.21ರಂದು ಬೆಳಿಗ್ಗೆ 9.30ಕ್ಕೆ ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.</p>.<p>ಲಸಿಕೆ ಪಡೆಯಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಕ್ರೀಡಾ ಸಾಧನೆಯ ಪ್ರಮಾಣ ಪತ್ರದೊಂದಿಗೆ ಬೆಳಿಗ್ಗೆ 9.30ರೊಳಗೆ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 7.96ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಒಟ್ಟು 832 ಜನರಿಗೆ ಕೋವಿಡ್–19 ದೃಢವಾಗಿದ್ದು, 552 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ 16 ಮಂದಿಗೆ ಕೋವಿಡ್–19 ಇರುವುದು ಶನಿವಾರ ದೃಢಪಟ್ಟಿದ್ದು, ಸಾವಿನ ಸಂಖ್ಯೆ 1,040ಕ್ಕೆ ಏರಿದೆ.</p>.<p><strong>ಉಡುಪಿ: </strong>ಜಿಲ್ಲೆಯಲ್ಲಿ 174 ಮಂದಿಗೆ ಕೋವಿಡ್–19 ದೃಢವಾಗಿದ್ದು, 454 ಜನರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,885 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟ ಇಬ್ಬರಿಗೆ ಕೋವಿಡ್ ಇರುವುದು ಶನಿವಾರ ಖಚಿತವಾಗಿದೆ.</p>.<p><strong>ಕಾಸರಗೋಡು: </strong>ಜಿಲ್ಲೆಯಲ್ಲಿ ಶನಿವಾರ 493 ಮಂದಿಗೆ ಸೋಂಕು ದೃಢಪಟ್ಟಿದ್ದು, 539 ಮಂದಿ ಗುಣಮುಖರಾಗಿದ್ದಾರೆ. 3,459 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 79,866 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 75,759 ಮಂದಿ ಗುಣಮುಖರಾಗಿದ್ದಾರೆ.</p>.<p class="Subhead"><strong>ಕ್ರೀಡಾಪಟುಗಳಿಗೆ ನಾಳೆ ಲಸಿಕೆ:</strong> ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಲಸಿಕಾ ಶಿಬಿರವನ್ನು ಜೂ.21ರಂದು ಬೆಳಿಗ್ಗೆ 9.30ಕ್ಕೆ ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.</p>.<p>ಲಸಿಕೆ ಪಡೆಯಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಕ್ರೀಡಾ ಸಾಧನೆಯ ಪ್ರಮಾಣ ಪತ್ರದೊಂದಿಗೆ ಬೆಳಿಗ್ಗೆ 9.30ರೊಳಗೆ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>