ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರ ಆದಾಯದ ಮೂಲವಾದ ಕೃಷಿ ಭೂಮಿಯಲ್ಲಿ ವಿದ್ಯುತ್ ಟವರ್ ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಶಾಸಕರು ಹಾಗೂ ಸಂಸದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳು ತುಂಬುತ್ತಿವೆ. ರೈತರಿಗೆ ನ್ಯಾಯ ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಎಚ್ಚರಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿ, ‘ವಿದ್ಯುತ್ ಮಾರ್ಗದಿಂದ 1,000 ಹೆಕ್ಟೇರ್ ಕೃಷಿ ಭೂಮಿ ಯೋಜನೆಯಿಂದ ನಾಶವಾಗುತ್ತಿದೆ. ಯೋಜನೆಯ ಸಾಧಕ–ಬಾಧಕದ ವಿಮರ್ಶಿಸದೆ, ಏಕಾಏಕಿ ಅನುಮತಿ ನೀಡಿರುವ ಕ್ರಮ ಸರಿಯಲ್ಲ. ಕಂಪನಿಯ ಸಿಬ್ಬಂದಿ ಕೃಷಿ ಭೂಮಿಗೆ ಕಾಲಿಟ್ಟರೆ ಕಟ್ಟಿ ಹಾಕುವ ತೀರ್ಮಾನ ಮಾಡಲಾಗಿದೆ. ಈಗಾಗಲೇ ತೆಗೆದ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಸಂಘ ಮಾಡಲಿದೆ’ ಎಂದು ತಿಳಿಸಿದರು.