ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲ್, ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬೆಳ್ತಂಗಡಿ ಬಿಲ್ಲವ ಯುವವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ವಕೀಲ ಮನೋಹರ್, ವೇಣೂರು ಯುವವಾಹಿನಿ ಅಧ್ಯಕ್ಷ ಯೋಗೀಶ್, ರವಿ ಪೂಜಾರಿ ಚಿಲಿಂಬಿ, ರಾಜೇಂದ್ರ ಚಿಲಿಂಬಿ ನವೀನ್ ಪಚ್ಚೇರಿ, ಮೋಹನ್ ಪಡೀಲ್, ಪುರುಷೋತ್ತಮ ಸಜಿಪ, ರಾಜೇಶ್ ಸುವರ್ಣ, ಪ್ರವೀಣ್ ಅರ್ಕುಳ ಮೊದಲಾದವರಿದ್ದರು.
ಬಿಲ್ಲವ ಸಮಾಜದಿಂದ ಮನೆ ನಿರ್ಮಾಣ
ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಮಸ್ತ ಬಿಲ್ಲವ ಸಮುದಾಯದ ನೇತೃತ್ವದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಸಂಘಟಕರು ಭರವಸೆ ನೀಡಿದರು. ಈ ಸಂದರ್ಭ ಗುರುಬೆಳದಿಂಗಳು ಫೌಂಡೇಶನ್ನಿಂದ ₹ 1 ಲಕ್ಷ ಪರಿಹಾರ ಹಸ್ತಾಂತರಿಸಲಾಯಿತು.