ಬಿಜೆಪಿ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.