ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಂಗಡಿ|ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್ಐಎ ಅಧಿಕಾರಿ ಭೇಟಿ

Published 17 ಜುಲೈ 2023, 16:16 IST
Last Updated 17 ಜುಲೈ 2023, 16:16 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪೈಕಿ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯ ಅಗ್ನಾಡಿ ನಿವಾಸಿ ಮಸೂದ್ ಮನೆಗೆ ಎನ್ಐಎ ಅಧಿಕಾರಿಗಳು ಭಾನುವಾರ ಭೇಟಿ ನೀಡಿ, ಆ.18ರ ಒಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಎರಡನೇ ಬಾರಿ ಅಂಟಿಸಿದ್ದಾರೆ.

ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು ಆ.18ರ ಒಳಗೆ ನ್ಯಾಯಾಲಯಕ್ಕೆ ಶರಣಾಗದಿದ್ದರೆ ಮನೆಯನ್ನು ಜಪ್ತಿ ಮಾಡುವ ಬಗ್ಗೆ ಹಾಗೂ ತಲೆ ಮರೆಸಿಕೊಂಡಿರುವ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಪ್ರಕಟಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆಯ ರಾಜ್ಯ ಮಟ್ಟದ ನಾಯಕ ಮಸೂದ್ ಶಾಮೀಲಾಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಸುಳಿವು ಲಭಿಸಿದ ದಿನದಿಂದ ತಲೆ ಮರೆಸಿಕೊಂಡಿದ್ದ. ಪ್ರಕರಣದಲ್ಲಿ 5ನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು. ನೋಟಿಸ್‌ ಅಂಟಿಸುವ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಎನ್ಐಎ ಅಧಿಕಾರಿಗಳೊಂದಿಗೆ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT