ಹತ್ಯೆಯಲ್ಲಿ ಭಾಗಿಯಾಗಿದ್ದ ಒಬ್ಬಾತ ಬೆಂಗಳೂರಿಗೆ ತೆರಳಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇತ್ತು. ಈ ಸುಳಿವಿನ ಆಧಾರದಲ್ಲಿ ಬೆಂಗಳೂರಿನ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನು ಭಾನುವಾರ ರಾತ್ರಿ ವಶಕ್ಕೆ ಪಡೆದು ಜಿಲ್ಲೆಗೆ ಕರೆ ತಂದಿದ್ದಾರೆ. ಪೊಲೀಸ್ ವಶದಲ್ಲಿರುವ ಈ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದವರೊ ಅಥವಾ ಆರೋಪಿಗೆ ಆಶ್ರಯ ನೀಡಿದವರೋ ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ.