'ನಳಿನ್ ಕುಮಾರ್ ಕಟೀಲ್ ಹಾಗೂ ಸುನಿಲ್ ಕುಮಾರ್ ಅವರು ಬೆಳ್ಳಾರೆಗೆ ವರುವವರೆಗೂ ಯಾವುದೇ ಗಲಾಟೆ ಆಗಿರಲಿಲ್ಲ. ಪಾರ್ಥೀವ ಶರೀರದ ಮೆರವಣಿಗೆ ಬರುವಾಗ ನಿಂತಿಕಲ್ಲುವಿನಲ್ಲಿ ಸಾವಿರಾರು ಕಾರ್ಯಕರ್ತರು ಸೇರಿದ್ದರು. ಆದರೂ ಯಾವುದೇ ಗೊಂದಲ ಉಂಟಾಗಿರಲಿಲ್ಲ. ನಾಯಕರು ಬಂದ ಬಳಿಕ ಕಾರ್ಯಕರ್ತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ದುಡಿದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸುವ ಮೂಲಕ ಅವರನ್ನು ಪಕ್ಷವು ಹೇಗೆ ನಡೆಸಿಕೊಳ್ಳುತ್ತದೆ ಎಂದು ತೋರಿಸಿಕೊಟ್ಟಿದ್ದೀರಿ' ಎಂದು ನೋವಿನಿಂದ ಹೇಳಿದರು.