ಶಿಕ್ಷೆ ನೀಡಿ: ಈ ಕೃತ್ಯದ ಹಿಂದೆ ಅನೇಕರು ಇದ್ದಾರೆ. ಅವರೆಲ್ಲರನ್ನೂ ಪತ್ತೆ ಮಾಡಿ ಎಲ್ಲರಿಗೂ ಶಿಕ್ಷೆ ನೀಡಬೇಕು. ಜಾಮೀನು ನೀಡಲು ಹೋದವರಿಗೂ ಶಿಕ್ಷೆ ಆಗಬೇಕು. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ನೂತನ ಆಗ್ರಹಿಸಿದರು. ಘಟನೆ ನಡೆದು ತುಂಬಾ ಹೊತ್ತು ತನಕ ಪ್ರವೀಣ್ ಉಸಿರಾಡುತ್ತಿದ್ದರು. ಒಂದು ವೇಳೆ ಬೆಳ್ಳಾರೆಯಲ್ಲೇ ಸುಸಜ್ಜಿತ ಆಸ್ಪತ್ರೆ ಇರುತ್ತಿದ್ದರೆ ಅವರು ಉಳಿಯುತ್ತಿದ್ದರು. ನನ್ನ ಗಂಡನ ನೆನಪಿಗಾದರೂ ಇಲ್ಲೊಂದು ಸುಸಜ್ಜಿತ ಆಸ್ಪತ್ರೆ ಮಾಡಿ ಸರ್ ಎಂದು ವಿನಂತಿಸಿದರು.