ಮಹಮ್ಮದ್ ಝಾಕೀರ್ ಮತ್ತು ಶಫೀಕ್ನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿ, ಗುರುವಾರ ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶ ಗೌಡ ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು. ಈ ನಡುವೆ ಬೆಳ್ಳಾರೆ ಠಾಣೆಯ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳಿಬ್ಬರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿಕೆ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಾಲಯ ಇಬ್ಬರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.