<p><strong>ಮಂಗಳೂರು: </strong>ಮಂಗಳೂರುಮಹಾನಗರ ಪಾಲಿಕೆಯ 22 ನೇ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲಾ ರಾವ್ ಮಂಗಳವಾರ ಆಯ್ಕೆಯಾದರು.</p>.<p>ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅನಿಲ್ ಕುಮಾರ್ ವಿರುದ್ದ ಬಿಜೆಪಿಯ ಪ್ರೇಮಾನಂದ ಶೆಟ್ಟಿ 46-14ಮತಗಳಿಂದ ಗೆಲುವು ಸಾಧಿಸಿದರು.</p>.<p>ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಜೆಸಿಂತಾ ವಿರುದ್ಧ ಸುಮಂಗಲಾ ರಾವ್ 46-14 ಮತಗಳಿಂದ ಗೆಲುವು ಸಾಧಿಸಿದರು.</p>.<p>ಮಂಗಳಾದೇವಿ ವಾರ್ಡ್ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್ ಅವರು ಕುಂಜತ್ತ್ಬೈಲ್ ದಕ್ಷಿಣ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.</p>.<p>ಮೇಯರ್ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.</p>.<p>ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್ಡಿಪಿಐ 2 ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಮಂಗಳೂರುಮಹಾನಗರ ಪಾಲಿಕೆಯ 22 ನೇ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲಾ ರಾವ್ ಮಂಗಳವಾರ ಆಯ್ಕೆಯಾದರು.</p>.<p>ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅನಿಲ್ ಕುಮಾರ್ ವಿರುದ್ದ ಬಿಜೆಪಿಯ ಪ್ರೇಮಾನಂದ ಶೆಟ್ಟಿ 46-14ಮತಗಳಿಂದ ಗೆಲುವು ಸಾಧಿಸಿದರು.</p>.<p>ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಜೆಸಿಂತಾ ವಿರುದ್ಧ ಸುಮಂಗಲಾ ರಾವ್ 46-14 ಮತಗಳಿಂದ ಗೆಲುವು ಸಾಧಿಸಿದರು.</p>.<p>ಮಂಗಳಾದೇವಿ ವಾರ್ಡ್ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್ ಅವರು ಕುಂಜತ್ತ್ಬೈಲ್ ದಕ್ಷಿಣ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.</p>.<p>ಮೇಯರ್ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.</p>.<p>ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್ಡಿಪಿಐ 2 ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>