<p>ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಬೆಳಕಿಗೆ ತರುವ ಹಾಗೂ ಸಂರಕ್ಷಿಸುವ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಕನ್ನಡ ಶಾಸನಗಳ ಶೋಧನಾ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಶನಿವಾರ ಇಲ್ಲಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಚಾಲನೆ ನೀಡಲಾಯಿತು.</p>.<p>ಪುತ್ತೂರು ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು, ದೇವಳದ ಒಳಾಂಗಣದಲ್ಲಿರುವ, 14ನೇ ಶತಮಾನದಲ್ಲಿ ವಿಜಯನಗರ ಅರಸರಿಂದ ಸ್ಥಾಪಿತವಾದ ಶಾಸನದ ಮುಂಭಾಗ ಮಾಹಿತಿ ಪತ್ರವನ್ನು ಅನಾವರಣಗೊಳಿಸಿ ಚಾಲನೆ ನೀಡಿದರು.</p>.<p>ಶಾಸನತಜ್ಞ ಉಮಾನಾಥ್ ಶೆಣೈ ಅವರು ದೇವಳದಲ್ಲಿರುವ ಶಾಸನವನ್ನು ಓದಿ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಪುತ್ತೂರು ಯೋಜನೆಯ ಕುರಿತು ಮಾಹಿತಿ ನೀಡಿದರು.</p>.<p>ಸಾಹಿತಿ ಮಲ್ಲಿಕಾ ಜೆ.ರೈ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಬೆಳಕಿಗೆ ತರುವ ಹಾಗೂ ಸಂರಕ್ಷಿಸುವ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಕನ್ನಡ ಶಾಸನಗಳ ಶೋಧನಾ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಶನಿವಾರ ಇಲ್ಲಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಚಾಲನೆ ನೀಡಲಾಯಿತು.</p>.<p>ಪುತ್ತೂರು ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು, ದೇವಳದ ಒಳಾಂಗಣದಲ್ಲಿರುವ, 14ನೇ ಶತಮಾನದಲ್ಲಿ ವಿಜಯನಗರ ಅರಸರಿಂದ ಸ್ಥಾಪಿತವಾದ ಶಾಸನದ ಮುಂಭಾಗ ಮಾಹಿತಿ ಪತ್ರವನ್ನು ಅನಾವರಣಗೊಳಿಸಿ ಚಾಲನೆ ನೀಡಿದರು.</p>.<p>ಶಾಸನತಜ್ಞ ಉಮಾನಾಥ್ ಶೆಣೈ ಅವರು ದೇವಳದಲ್ಲಿರುವ ಶಾಸನವನ್ನು ಓದಿ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಪುತ್ತೂರು ಯೋಜನೆಯ ಕುರಿತು ಮಾಹಿತಿ ನೀಡಿದರು.</p>.<p>ಸಾಹಿತಿ ಮಲ್ಲಿಕಾ ಜೆ.ರೈ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>