ಪತ್ರಕರ್ತರ ಸಂಘದ ಕಡಬ ತಾಲ್ಲೂಕು ಘಟಕದ ವತಿಯಿಂದ ಈಚೆಗೆ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಸಮಾಜ ಬದಲಾವಣೆಗೆ ಪತ್ರಕರ್ತರು ವರದಿ ಮೂಲಕ ಮಾತ್ರ ಕೊಡುಗೆ ನೀಡುತ್ತಾರೆ. ಅಭಿವೃದ್ಧಿ ವಿಚಾರಕ್ಕೂ ಕೈ ಹಾಕುತ್ತಾರೆ ಎನ್ನುವುದಕ್ಕೆ ಕೆಲವು ತಿಂಗಳ ಹಿಂದೆ ಕಡಬ ತಾಲ್ಲೂಕಿನ ಕುಗ್ರಾಮವಾದ ಕೊಂಬಾರು ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತ್ಯವ್ಯ ಕಾರ್ಯಕ್ರಮ ಉದಾಹರಣೆಯಾಗಿದೆ. ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳನ್ನು ಸೇರಿಸಿ, ಗ್ರಾಮ ಅಭಿವೃದ್ಧಿಗೆ ಬೇಕಾದ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವ ಕಾರ್ಯಕ್ಕೂ ಮುಂದಾಗಿರುವುದು ಶ್ಲಾಘನೀಯ’ ಎಂದರು.