<p><strong>ಮಂಗಳೂರು</strong>: ಕಂಬಳ ಕುರಿತ ‘ಬಿರ್ದ್ ದ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ದೃಶ್ಯಕ್ಕೆ ಕತ್ತರಿ ಹಾಕಲು ಒತ್ತಡ ಬಂದಿತ್ತು ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಶನಿವಾರ ಇಲ್ಲಿ ಹೇಳಿದರು.</p><p>ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ವಿಷಯದಲ್ಲಿ ವಿವಾದ ಆಗುತ್ತಿದ್ದಾಗ, ಹೆಗ್ಗಡೆ ಅವರ ದೃಶ್ಯ ತೆಗೆದುಹಾಕಬೇಕು ಎಂದು ಕೆಲವರು ಒತ್ತಾಯಿಸಿದ್ದರು ಎಂದರು.</p><p>‘ಸಿನಿಮಾ ಬೇರೆ, ರಾಜಕೀಯ ಬೇರೆ. ಚಿತ್ರದ ದೃಶ್ಯ ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದ್ದೆ. ಹಾಗಾದರೆ ಬಿಡುಗಡೆ ವೇಳೆ ಈ ದೃಶ್ಯ ಇರಬಾರದು ಎಂದು ಹೇಳಿದರು. ಅದಕ್ಕೂ ಒಪ್ಪಲಿಲ್ಲ' ಎಂದು ಹೇಳಿದರು. </p><p>‘ಚಿತ್ರದ ಕೊನೆಯಲ್ಲಿ ಎರಡು ಕುಟುಂಬಗಳಿಗೆ ಬುದ್ದಿ ಹೇಳುವಾಗಿನ ಪಾತ್ರಕ್ಕೆ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪಾತ್ರ ನಿರ್ವಹಿಸಲು ಅವರು ಅತ್ಯಂತ ಸೂಕ್ತ ವ್ಯಕ್ತಿ. ಕೋಟಿ ಮೊತ್ತ ಕೊಟ್ಟರೂ ಈ ಪಾತ್ರಕ್ಕೆ ಇಂಥ ವ್ಯಕ್ತಿ ಸಿಗುತ್ತಿರಲಿಲ್ಲ' ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಂಬಳ ಕುರಿತ ‘ಬಿರ್ದ್ ದ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ದೃಶ್ಯಕ್ಕೆ ಕತ್ತರಿ ಹಾಕಲು ಒತ್ತಡ ಬಂದಿತ್ತು ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಶನಿವಾರ ಇಲ್ಲಿ ಹೇಳಿದರು.</p><p>ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ವಿಷಯದಲ್ಲಿ ವಿವಾದ ಆಗುತ್ತಿದ್ದಾಗ, ಹೆಗ್ಗಡೆ ಅವರ ದೃಶ್ಯ ತೆಗೆದುಹಾಕಬೇಕು ಎಂದು ಕೆಲವರು ಒತ್ತಾಯಿಸಿದ್ದರು ಎಂದರು.</p><p>‘ಸಿನಿಮಾ ಬೇರೆ, ರಾಜಕೀಯ ಬೇರೆ. ಚಿತ್ರದ ದೃಶ್ಯ ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದ್ದೆ. ಹಾಗಾದರೆ ಬಿಡುಗಡೆ ವೇಳೆ ಈ ದೃಶ್ಯ ಇರಬಾರದು ಎಂದು ಹೇಳಿದರು. ಅದಕ್ಕೂ ಒಪ್ಪಲಿಲ್ಲ' ಎಂದು ಹೇಳಿದರು. </p><p>‘ಚಿತ್ರದ ಕೊನೆಯಲ್ಲಿ ಎರಡು ಕುಟುಂಬಗಳಿಗೆ ಬುದ್ದಿ ಹೇಳುವಾಗಿನ ಪಾತ್ರಕ್ಕೆ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪಾತ್ರ ನಿರ್ವಹಿಸಲು ಅವರು ಅತ್ಯಂತ ಸೂಕ್ತ ವ್ಯಕ್ತಿ. ಕೋಟಿ ಮೊತ್ತ ಕೊಟ್ಟರೂ ಈ ಪಾತ್ರಕ್ಕೆ ಇಂಥ ವ್ಯಕ್ತಿ ಸಿಗುತ್ತಿರಲಿಲ್ಲ' ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>