ನಾಗರಪಂಚಮಿ, ವರಮಹಾಲಕ್ಷ್ಮೀ ಹಬ್ಬ ಕಳೆದು, ಇದೀಗ ಅಷ್ಟಮಿ ಬಂದಿದೆ ಶ್ರೀಕೃಷ್ಣ ಜನ್ಮಾಷ್ಟಮಿಗಾಗಿ ನಗರದ ದೇವಸ್ಥಾನ, ಸಂಘ-ಸಂಸ್ಥೆಗಳಲ್ಲಿ ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ಉತ್ತರ ಕರ್ನಾಟಕ ಜಿಲ್ಲೆಗಳಿಂದಲೂ ವ್ಯಾಪಾರಸ್ಥರು ನಗರಕ್ಕೆ ಬಂದಿದ್ದು, ಬಿಜೈ, ಹಂಪನಕಟ್ಟೆ, ಕಂಕನಾಡಿ, ಸ್ಟೇಟ್ಬ್ಯಾಂಕ್, ರಥಬೀದಿ ಮುಂತಾದೆಡೆಗಳಲ್ಲಿ ಹೂ, ಹಣ್ಣು, ತರಕಾರಿ ಮಾರಾಟದಲ್ಲಿ ತೊಡಗಿದ್ದಾರೆ.