ಬೆಂಗಳೂರು ಪೊಲೀಸರು ರಫೀಕ್ನನ್ನು ಕಳ್ಳತನ ಪ್ರಕರಣದಲ್ಲಿ ಬಂಧಿಸಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಆತನನ್ನು ವೇಣೂರು ಪೊಲೀಸರು ಬಾಡಿ ವಾರೆಂಟ್ ಪಡೆದು ಕರೆತಂದಿದ್ದರು. ಕುತ್ಲೂರು ಬಸದಿಯಲ್ಲಿ ಕಳ್ಳತನ ಮತ್ತು ಮೂಡ್ಲದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಳವು ಮಾಡಿದ ಆರೋಪದ ಮೇಲೆ ಈತನ ವಿರುದ್ಧ ಪ್ರಕರಣಗಳಿವೆ. ಮೂಲ್ಕಿ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯ ಹಲವೆಡೆ ಈತನ ವಿರುದ್ಧ ಪ್ರಕರಣಗಳಿವೆ.