ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿಪ್ರಸಾದ್, ‘ಕುಂದಾಪುರದ ಇಬ್ಬರು ಯುವಕರು ಹಾಗೂ ಕೇರಳದ ಯುವತಿ ಮದುವೆಗಾಗಿ ಬೆಂಗಳೂರಿಗೆ ತೆರಳುತ್ತಿದ್ದರು. ಬಂಟ್ವಾಳದಲ್ಲಿ ತಂಡವೊಂದು ಬಸ್ ತಡೆದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೂವರನ್ನು ರಕ್ಷಣೆ ಮಾಡಿದ್ದು, ನಂತರ ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ’ ಎಂದು ತಿಳಿಸಿದ್ದಾರೆ.