<p><strong>ಮಂಗಳೂರು:</strong> ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (ಕೆಐಒಸಿಎಲ್)ಯ ವಿವಿಧ ಯೋಜನೆಗಳಿಗೆ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿದರು.</p>.<p>ಕೆಐಒಸಿಎಲ್ನಲ್ಲಿ ಆರಂಭಿಸಲಾದ 6 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ, ಆದಿ ಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಿದ ಆಮ್ಲಜನಕ ಉತ್ಪಾದನಾ ಘಟಕ, ಮಂಗಳೂರಿನ ಪೆಲ್ಲೆಟ್ ಘಟಕದಲ್ಲಿ ಬ್ಯಾರೆಲ್ ಟೈಪ್ ಬ್ಲೆಂಡರ್ ರಿಕ್ಲೇಮರ್, ಮೂಡುಬಿದಿರೆ ಸರ್ಕಾರಿ ಆಸ್ಪತ್ರೆಗೆ 50 ಹಾಸಿಗೆಗಳ ಸೌಲಭ್ಯಗಳನ್ನು ಉದ್ಘಾಟಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸರ್ಕಾರ ಕೆಐಒಸಿಎಲ್ಗೆ ಗಣಿ ನಿರ್ವಹಣೆ ವಹಿಸಿರುವುದು ಸ್ವಾಗತಾರ್ಹ. ಈ ಮೂಲಕ ಕೆಐಒಸಿಎಲ್ ಇನ್ನಷ್ಟು ಸಾಧನೆ ಮಾಡಲಿ. ಜೊತೆಗೆ ಸ್ಥಳೀಯ ಅಭಿವೃದ್ಧಿಗೆ ಸಿಎಸ್ಆರ್ ಅನುದಾನವನ್ನು ವಿನಿಯೋಗಿಸಲಿ ಎಂದು ಸಲಹೆ ನೀಡಿದರು.</p>.<p>ಕೋವಿಡ್ 2 ನೇ ಅಲೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಯಿತು. ದೇಶದಲ್ಲಿ ಆಮ್ಲಜನಕದ ಕೊರತೆ ಉದ್ಭವಿಸಿದ ಸಂದರ್ಭದಲ್ಲಿ ಉಕ್ಕು ಕಂಪನಿಗಳು ಹಾಗೂ ಪೆಟ್ರೋಲಿಯಂ ಕಂಪನಿಗಳು ಸಾಕಷ್ಟು ಸಹಕಾರ ನೀಡಿವೆ. ಸದ್ಯಕ್ಕೆ ಆಮ್ಲಜನಕದ ಕೊರತೆ ನೀಗಿದೆ ಎಂದರು.</p>.<p>ಲಸಿಕೆ ಅಭಿಯಾನ ಬಹುದೊಡ್ಡ ಯಶಸ್ಸು ಎಂದು ಬಣ್ಣಿಸಿದ ಸಚಿವ ಧರ್ಮೇಂದ್ರ ಪ್ರಧಾನ್, ಲಸಿಕಾ ಮೇಳದ ಮೂಲಕ ಒಂದೇ ದಿನ 82 ಲಕ್ಷ ಜನರಿಗೆ ಲಸಿಕೆ ಹಾಕುವ ಮೂಲಕ ದೇಶವು ಸಾಧನೆ ಮಾಡಿದೆ. 8.72 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ದೇಶದಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಕೆಐಒಸಿಎಲ್ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸುಬ್ಬರಾವ್, ಸಂಸದರು, ಶಾಸಕರು, ಕೆಐಒಸಿಎಲ್ನ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (ಕೆಐಒಸಿಎಲ್)ಯ ವಿವಿಧ ಯೋಜನೆಗಳಿಗೆ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿದರು.</p>.<p>ಕೆಐಒಸಿಎಲ್ನಲ್ಲಿ ಆರಂಭಿಸಲಾದ 6 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ, ಆದಿ ಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಿದ ಆಮ್ಲಜನಕ ಉತ್ಪಾದನಾ ಘಟಕ, ಮಂಗಳೂರಿನ ಪೆಲ್ಲೆಟ್ ಘಟಕದಲ್ಲಿ ಬ್ಯಾರೆಲ್ ಟೈಪ್ ಬ್ಲೆಂಡರ್ ರಿಕ್ಲೇಮರ್, ಮೂಡುಬಿದಿರೆ ಸರ್ಕಾರಿ ಆಸ್ಪತ್ರೆಗೆ 50 ಹಾಸಿಗೆಗಳ ಸೌಲಭ್ಯಗಳನ್ನು ಉದ್ಘಾಟಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸರ್ಕಾರ ಕೆಐಒಸಿಎಲ್ಗೆ ಗಣಿ ನಿರ್ವಹಣೆ ವಹಿಸಿರುವುದು ಸ್ವಾಗತಾರ್ಹ. ಈ ಮೂಲಕ ಕೆಐಒಸಿಎಲ್ ಇನ್ನಷ್ಟು ಸಾಧನೆ ಮಾಡಲಿ. ಜೊತೆಗೆ ಸ್ಥಳೀಯ ಅಭಿವೃದ್ಧಿಗೆ ಸಿಎಸ್ಆರ್ ಅನುದಾನವನ್ನು ವಿನಿಯೋಗಿಸಲಿ ಎಂದು ಸಲಹೆ ನೀಡಿದರು.</p>.<p>ಕೋವಿಡ್ 2 ನೇ ಅಲೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಯಿತು. ದೇಶದಲ್ಲಿ ಆಮ್ಲಜನಕದ ಕೊರತೆ ಉದ್ಭವಿಸಿದ ಸಂದರ್ಭದಲ್ಲಿ ಉಕ್ಕು ಕಂಪನಿಗಳು ಹಾಗೂ ಪೆಟ್ರೋಲಿಯಂ ಕಂಪನಿಗಳು ಸಾಕಷ್ಟು ಸಹಕಾರ ನೀಡಿವೆ. ಸದ್ಯಕ್ಕೆ ಆಮ್ಲಜನಕದ ಕೊರತೆ ನೀಗಿದೆ ಎಂದರು.</p>.<p>ಲಸಿಕೆ ಅಭಿಯಾನ ಬಹುದೊಡ್ಡ ಯಶಸ್ಸು ಎಂದು ಬಣ್ಣಿಸಿದ ಸಚಿವ ಧರ್ಮೇಂದ್ರ ಪ್ರಧಾನ್, ಲಸಿಕಾ ಮೇಳದ ಮೂಲಕ ಒಂದೇ ದಿನ 82 ಲಕ್ಷ ಜನರಿಗೆ ಲಸಿಕೆ ಹಾಕುವ ಮೂಲಕ ದೇಶವು ಸಾಧನೆ ಮಾಡಿದೆ. 8.72 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ದೇಶದಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಕೆಐಒಸಿಎಲ್ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸುಬ್ಬರಾವ್, ಸಂಸದರು, ಶಾಸಕರು, ಕೆಐಒಸಿಎಲ್ನ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>