‘ಯಾವುದೇ ಷರತ್ತುಗಳಿಲ್ಲದೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು, ಅಡಿಕೆ ಕೊಳೆರೋಗಕ್ಕೆ ತಕ್ಷಣ ಪರಿಹಾರ ನೀಡಬೇಕು. ಕೃಷಿ ಕ್ಷೇತ್ರವು ಹವಾಮಾನ ವೈಪರಿತ್ಯ, ಬೆಲೆ ಕುಸಿತ, ಬೆಳೆ ನಾಶಗಳಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಅಡಿಕೆ ಬೆಳೆಯು ಕೊಳೆರೋಗಕ್ಕೆ ತುತ್ತಾಗಿದ್ದು, ಶೇಕಡ 40ರಷ್ಟು ಬೆಳೆ ನಾಶವಾಗಿದೆ. ಸರ್ಕಾರ ಪರಿಹಾರ ನೀಡುವುದು, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಲ್ಲಿ ವಿಳಂಬ ಮಾಡುತ್ತಿದೆ’ ಎಂದು ಆರೋಪಿಸಿದರು.