ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಿಲ್ಲೆಗಳಲ್ಲೂ ನಾಮಫಲಕ ಕಡ್ಡಾಯ ಮಾಡಬೇಕು. ನಾಡು–ನುಡಿಯ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕನ್ನಡ ಪರ ಕೆಲಸ ಮಾಡುವ ಅಭ್ಯರ್ಥಿಗಳನ್ನು ವೇದಿಕೆ ಬೆಂಬಲಿಸಲಿದೆ. ಹಿಂದಿ ಮಾತನಾಡುವ ಉತ್ತರ ಭಾರತದವರ ಪ್ರಮಾಣ ಹೆಚ್ಚಾಗಿದೆ. ವಲಸೆಗೆ ಕಡಿವಾಣ ಹಾಕದಿದ್ದರೆ, ಭವಿಷ್ಯದಲ್ಲಿ ಭಾಷೆ, ಸಂಸ್ಕೃತಿಗೆ ಧಕ್ಕೆಯಾಗಲಿದೆ’ ಎಂದರು.