<p><strong>ವಿಟ್ಲ:</strong> ಶಿಕ್ಷಕರ ಕೊರತೆ ಮತ್ತು ಶೈಕ್ಷಣಿಕ ಅವಧಿಯ ಮಧ್ಯಭಾಗದಲ್ಲಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲಾ ಮಕ್ಕಳು ತರಗತಿ ಬಹಿಷ್ಕಾರಿಸಿ ಪ್ರತಿಭಟನೆ ನಡೆಸಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಶನಿವಾರ ನಡೆಯಿತು.</p>.<p>ಪೋಷಕರೂ ಶಾಲೆಯ ಗೇಟಿಗೆ ಬೀಗ ಹಾಕಿ, ನಮ್ಮ ಬೇಡಿಕೆ ಈಡೇರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ತಾಲ್ಲೂಕು ಶಿಕ್ಷಣಾಧಿಕಾರಿ ಸ್ಥಳಕ್ಕೆ ಬರುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೂಲಕ ಶಿಕ್ಷಕರ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.</p>.<p>ಎಸ್ಡಿಎಂಸಿ ಸಮನ್ವಯ ವೇದಿಕೆ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಉಮ್ಮರ್ ಫಾರೂಕ್ ಟೆಕ್ನಿಕ್ ಮಾಹಿತಿ ನೀಡಿದರು.</p>.<p>ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಇಸಿಒ ಸುಜಾತಾ, ಸುಧಾ, ಸಿಆರ್ಪಿ ಬಿಂಧು ಬಿ.ಜೆ. ಭೇಟಿ ನೀಡಿ ಅವಹಾಲು ಸ್ವೀಕರಿಸಿ, ಸೋಮವಾರ ಇಬ್ಬರು ಅತಿಥಿ ಶಿಕ್ಷಕರನ್ನು ಒದಗಿಸಲಾಗುವುದು. ಸೋಮವಾರದಿಂದ ಎಂದಿನಂತೆ ತರಗತಿ ಆರಂಭಿಸಲಾಗುವುದು ಎಂದು ತಿಳಿಸಿದರು. ಬಳಿಕ ಪ್ರತಿಭಟನೆ ಕೊನೆಗೊಳಿಸಲಾಯಿತು.</p>.<p>ಪ್ರಮುಖರಾದ ಅಬ್ದುಲ್ಲಾ ಕುಕ್ಕಿಲ, ಮಜಿ ರಾಮ್ ಭಟ್, ಜಯಂತ್ ಪೂರ್ಲಿಪ್ಪಾಡಿ, ರವೀಶ್ ಶೆಟ್ಟಿ ಕರ್ಕಳ, ರೇಷ್ಮಾ ಶಂಕರಿ ಬಲಿಪಗುಲಿ, ಪ್ರೇಮ ಮದಕ, ಹರ್ಷದ್ ಕುಕ್ಕಿಲ, ಹಸೈನಾರ್ ತಾಳಿತ್ತನೂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ:</strong> ಶಿಕ್ಷಕರ ಕೊರತೆ ಮತ್ತು ಶೈಕ್ಷಣಿಕ ಅವಧಿಯ ಮಧ್ಯಭಾಗದಲ್ಲಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲಾ ಮಕ್ಕಳು ತರಗತಿ ಬಹಿಷ್ಕಾರಿಸಿ ಪ್ರತಿಭಟನೆ ನಡೆಸಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಶನಿವಾರ ನಡೆಯಿತು.</p>.<p>ಪೋಷಕರೂ ಶಾಲೆಯ ಗೇಟಿಗೆ ಬೀಗ ಹಾಕಿ, ನಮ್ಮ ಬೇಡಿಕೆ ಈಡೇರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ತಾಲ್ಲೂಕು ಶಿಕ್ಷಣಾಧಿಕಾರಿ ಸ್ಥಳಕ್ಕೆ ಬರುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೂಲಕ ಶಿಕ್ಷಕರ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.</p>.<p>ಎಸ್ಡಿಎಂಸಿ ಸಮನ್ವಯ ವೇದಿಕೆ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಉಮ್ಮರ್ ಫಾರೂಕ್ ಟೆಕ್ನಿಕ್ ಮಾಹಿತಿ ನೀಡಿದರು.</p>.<p>ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಇಸಿಒ ಸುಜಾತಾ, ಸುಧಾ, ಸಿಆರ್ಪಿ ಬಿಂಧು ಬಿ.ಜೆ. ಭೇಟಿ ನೀಡಿ ಅವಹಾಲು ಸ್ವೀಕರಿಸಿ, ಸೋಮವಾರ ಇಬ್ಬರು ಅತಿಥಿ ಶಿಕ್ಷಕರನ್ನು ಒದಗಿಸಲಾಗುವುದು. ಸೋಮವಾರದಿಂದ ಎಂದಿನಂತೆ ತರಗತಿ ಆರಂಭಿಸಲಾಗುವುದು ಎಂದು ತಿಳಿಸಿದರು. ಬಳಿಕ ಪ್ರತಿಭಟನೆ ಕೊನೆಗೊಳಿಸಲಾಯಿತು.</p>.<p>ಪ್ರಮುಖರಾದ ಅಬ್ದುಲ್ಲಾ ಕುಕ್ಕಿಲ, ಮಜಿ ರಾಮ್ ಭಟ್, ಜಯಂತ್ ಪೂರ್ಲಿಪ್ಪಾಡಿ, ರವೀಶ್ ಶೆಟ್ಟಿ ಕರ್ಕಳ, ರೇಷ್ಮಾ ಶಂಕರಿ ಬಲಿಪಗುಲಿ, ಪ್ರೇಮ ಮದಕ, ಹರ್ಷದ್ ಕುಕ್ಕಿಲ, ಹಸೈನಾರ್ ತಾಳಿತ್ತನೂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>