ಅಗತ್ಯ ವಸ್ತುಗಳ ಕಾಯ್ದೆಯಡಿ ಹೆಚ್ಚಿನ ದಾಸ್ತಾನು ಇರಿಸುವಂತಿಲ್ಲ. ಆದರೆ, ಹೊಸ ಕಾಯ್ದೆಯಡಿ ಎಷ್ಟು ಬೇಕಾದರೂ ಭತ್ತವನ್ನು ಖರೀದಿಸಬಹುದು. ಅದಕ್ಕೆ ಯಾವುದೇ ನಿರ್ಬಂಧವಿಲ್ಲ. ಇದರಿಂದಾಗಿ ಬಂಡವಾಳಶಾಹಿಗಳು ಉತ್ಪನ್ನದ ಬೆಲೆ ಹೆಚ್ಚಳ ಆಗುವವರೆಗೆ ಗೋದಾಮುಗಳಲ್ಲಿ ದಾಸ್ತಾನು ಇರಿಸಲಿದ್ದು, ಬೆಲೆ ಹೆಚ್ಚಳದ ಲಾಭ ಪಡೆಯುವ ಪ್ರಯತ್ನ ಮಾಡಲಿದ್ದಾರೆ ಎಂದು ತಿಳಿಸಿದರು.
ಶೈಕ್ಷಣಿಕ ವರ್ಷ ಕಳೆಯಲು ಇನ್ನು ನಾಲ್ಕು ತಿಂಗಳಷ್ಟೇ ಬಾಕಿ ಇದ್ದು, ಅಷ್ಟರಲ್ಲಿ ಶೇ 90ರಷ್ಟು ಪಠ್ಯ ಬೋಧಿಸಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಸಾಧ್ಯವೇ? ಸರ್ಕಾರದ ಈ ನೀತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಶಾಲೆ–ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಆಗಿಲ್ಲ. ಇದರಿಂದ ಈಗಿರುವ ಶಿಕ್ಷಕರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ ಎಂದು ಹೇಳಿದರು.