ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಧರಣಿ ನಡೆಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿ, ‘ತಾಲ್ಲೂಕಿನಲ್ಲಿ ಕೇವಲ 5 ಮಂದಿಗೆ ನದಿಯಿಂದ ಮರಳು ತೆಗೆಯಲು ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ತಾಲ್ಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆ ಯುತ್ತಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟು ಮನವಿ ಸಲ್ಲಿಸಿದರೂ ಯಾವುದೇ ಅಧಿಕಾರಿ ಸ್ಪಂದಿಸುತ್ತಿಲ್ಲ. ಅದರಿಂದಾಗಿ ಪ್ರತಿಭಟನೆ ಆರಂಭಿಸಿದ್ದೇನೆ. ಭರವಸೆ ಸಿಗುವವರೆಗೆ ಪ್ರತಿಭಟನೆ ನಡೆಸುತ್ತೇನೆ’ ಎಂದರು.