ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Last Updated 21 ಮಾರ್ಚ್ 2023, 5:20 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಎಂ ಮುಖಂಡ ಶೇಖರ ಲಾಯಿಲ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆಗೆ ಸೋಮವಾರ ಚಾಲನೆ ನೀಡಿದರು.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಧರಣಿ ನಡೆಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿ, ‘ತಾಲ್ಲೂಕಿನಲ್ಲಿ ಕೇವಲ 5 ಮಂದಿಗೆ ನದಿಯಿಂದ ಮರಳು ತೆಗೆಯಲು ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ತಾಲ್ಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆ ಯುತ್ತಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟು ಮನವಿ ಸಲ್ಲಿಸಿದರೂ ಯಾವುದೇ ಅಧಿಕಾರಿ ಸ್ಪಂದಿಸುತ್ತಿಲ್ಲ. ಅದರಿಂದಾಗಿ ಪ್ರತಿಭಟನೆ ಆರಂಭಿಸಿದ್ದೇನೆ. ಭರವಸೆ ಸಿಗುವವರೆಗೆ ಪ್ರತಿಭಟನೆ ನಡೆಸುತ್ತೇನೆ’ ಎಂದರು.

ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ಮುಂದುವರಿ ಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT