ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತುಳವರಿಗೆ ಶೇ 80 ರಷ್ಟು ಉದ್ಯೋಗ ನೀಡಿ’

Last Updated 14 ಫೆಬ್ರುವರಿ 2020, 9:07 IST
ಅಕ್ಷರ ಗಾತ್ರ

ಮಂಗಳೂರು: ತುಳುನಾಡಿನ ಕೈಗಾರಿಕೆಗಳಲ್ಲಿ ತುಳುವರಿಗೆ ಶೇ 80 ರಷ್ಟು ಉದ್ಯೋಗ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಉದ್ಯೋಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಗುರುವಾರ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ತುಳುನಾಡಿನಲ್ಲಿ ವಾಸಿಸುವ ಯುವಕರಿಗೆ ಸ್ಥಳೀಯ ಕೈಗಾರಿಕೆಗಳಲ್ಲಿ ಸೂಕ್ತ ಉದ್ಯೋಗ ಸಿಗುತ್ತಿಲ್ಲ. ಇದರಿಂದ ಯುವಕರು ಉದ್ಯೋಗ ಅರಸಿಕೊಂಡು ಬೇರೆ ಕಡೆ ಹೋಗುವಂತಾಗಿದೆ. ಹಾಗಾಗಿ ತುಳುನಾಡಿನ ಕೈಗಾರಿಕೆಗಳಲ್ಲಿ ತುಳುವರಿಗೆ ಶೇ 80 ಉದ್ಯೋಗ ಮೀಸಲು ನೀಡಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ಎಂ.ಜಿ. ಹೆಗಡೆ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಹಿಂದೂ ಸಭಾ ಮುಖಂಡರಾದ ರಾಜೇಶ್ ಪವಿತ್ರನ್, ವಕೀಲ ರಾಘವೇಂದ್ರ ರಾವ್ ಮಾತನಾಡಿದರು.

ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಜೆ. ಇಬ್ರಾಹಿಂ, ಆನಂದ ಅಮೀನ್ ಅಡ್ಯಾರ್, ರಮೇಶ್ ಪೂಜಾರಿ ಶೀರೂರು, ದೇವಿಪ್ರಸಾದ್ ವಾಮದಪದವು, ರಮೇಶ್ ಶೆಟ್ಟಿ ಮಜಲೋಡಿ, ಸುಭಾಷ್, ಸುದನ್, ಹಸನ್ ಅಡ್ಡೂರು, ಫಾರೂಕ್ ಗೋಲ್ಡನ್, ಅಝೀಝ್ ಉಳ್ಳಾಲ್, ಹಮೀದ್ ಕಾವೂರು, ಹರೀಶ್ ಶೆಟ್ಟಿ ಶಕ್ತಿನಗರ, ಶ್ರೀನಿವಾಸ ಉರ್ವ, ರೋಶನ್ ಶೇಡಿಗುರಿ, ಇರ್ಫಾನ್ ಕಲ್ಲಾಪು, ಶೋಹನ್ ಬೆಂದೂರು, ಗೈಟನ್ ರಾಡ್ರಿಗಸ್, ಜನಾರ್ದನ್ ಬೆಂಗ್ರೆ, ಸತೀಶ್ ಸಾಲ್ಯಾನ್, ಶಾರದಾ ಬಿಕರ್ನಕಟ್ಟೆ, ತನ್ವೀರ್, ಬ್ರಿಜೇಶ್, ವಿದ್ಯಾರ್ಥಿ ಮುಖಂಡರಾದ ಗುರುದತ್ತ ಮಲ್ಲಿ, ಭಾಷಿತ್, ತುಷಾರ್ ಕದ್ರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT