ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಮಾತನಾಡಿ, ವಿದ್ಯಾರ್ಥಿಗಳು ಇಂದಿನ ಸಾಮಾಜಿಕ ಮತ್ತು ವೈಚಾರಿಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸ ಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ತೇಜಸ್ವಿನಿ ಅವರು ರಚಿಸಿರುವ ‘ನನ್ನೊಳಗಿನ ಬುದ್ಧ’ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು.