<p><strong>ಪುತ್ತೂರು:</strong> ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ.</p><p>‘ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು. ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>‘ಎಲ್ಲ ಬಗೆಯ ವ್ಯವಸ್ಥೆ ಮಾಡಿದ್ದರೂ ಜನಸಂದಣಿಯಿಂದಾಗಿ ವ್ಯತ್ಯಯ ಆಯಿತು. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ. ಇದು ಕೂಡ ನನಗೆ ಬೇಸರ ತಂದಿದೆ. ರಾತ್ರಿ 9.30ರವರೆಗೂ ಉಡುಗೊರೆ ವಿತರಣೆ ನಡೆದಿದೆ’ ಎಂದು ಅವರು ತಿಳಿಸಿದ್ದಾರೆ.</p>.ಪುತ್ತೂರು |ಸಿಎಂ ಪಾಲ್ಗೊಂಡಿದ್ದ ‘ಜನಮನ’ದಲ್ಲಿ ನೂಕುನುಗ್ಗಲು: 11 ಮಂದಿ ಅಸ್ವಸ್ಥ.ತಪ್ಪು ಮಾಹಿತಿ ತಡೆಗೆ ಕಾಯ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ.</p><p>‘ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು. ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>‘ಎಲ್ಲ ಬಗೆಯ ವ್ಯವಸ್ಥೆ ಮಾಡಿದ್ದರೂ ಜನಸಂದಣಿಯಿಂದಾಗಿ ವ್ಯತ್ಯಯ ಆಯಿತು. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ. ಇದು ಕೂಡ ನನಗೆ ಬೇಸರ ತಂದಿದೆ. ರಾತ್ರಿ 9.30ರವರೆಗೂ ಉಡುಗೊರೆ ವಿತರಣೆ ನಡೆದಿದೆ’ ಎಂದು ಅವರು ತಿಳಿಸಿದ್ದಾರೆ.</p>.ಪುತ್ತೂರು |ಸಿಎಂ ಪಾಲ್ಗೊಂಡಿದ್ದ ‘ಜನಮನ’ದಲ್ಲಿ ನೂಕುನುಗ್ಗಲು: 11 ಮಂದಿ ಅಸ್ವಸ್ಥ.ತಪ್ಪು ಮಾಹಿತಿ ತಡೆಗೆ ಕಾಯ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>