‘ಪ್ರಾಂಶುಪಾಲರ ಜತೆ ನಿರಂತರ ಸಭೆ, ಚರ್ಚೆ ನಡೆಸುತ್ತೇವೆ. ಈ ಬಾರಿ ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ ಇದ್ದಿದ್ದರಿಂದ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ಪಡೆದು ಅವರನ್ನು ಪರೀಕ್ಷೆಗೆ ಸಿದ್ಧಪಡಿಸುವುದು ಸವಾಲಿನ ಕೆಲಸವಾಗಿತ್ತು. ಉಪನ್ಯಾಸಕರು ಆ ಕೆಲಸಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ನಾನು ಕೂಡ ಕಾಲೇಜುಗಳಿಗೆ ಭೇಟಿ ನೀಡುತ್ತ, ವಿದ್ಯಾರ್ಥಿಗಳ ಜತೆ ಸಂವಹನ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸುತ್ತಿದ್ದೆ. ವಿದ್ಯಾರ್ಥಿಗಳ ಅಭಿಪ್ರಾಯ ಆಧರಿಸಿ, ಅವುಗಳನ್ನು ಪರಿಹರಿಸುವ ಬಗ್ಗೆ ಸಭೆಗಳಲ್ಲಿ ಚರ್ಚಿಸುತ್ತಿದ್ದೆವು’ ಎಂದು ವಿವರಿಸಿದರು.