<p><strong>ಪುತ್ತೂರು:</strong> ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಕ್ಲಸ್ಟರ್ ವತಿಯಿಂದ ಮಹಾವೀರ ಸಭಾಂಗಣದಲ್ಲಿ ಕೃಷಿ ಅಭಿವೃದ್ಧಿ ಜನಸಂಪರ್ಕ ಶಿಬಿರ ಆಯೋಜಿಸಲಾಗಿತ್ತು.</p>.<p>ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ಸುನಿಲ್ ವಿ. ಪಾಟೀಲ ಉದ್ಘಾಟಿಸಿದರು. ಯೂನಿಯನ್ ಬ್ಯಾಂಕ್ನಿಂದ ರೈತರಿಗೆ, ಸ್ವಸಹಾಯ ಸಂಘಳಿಗೆ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಟಿ.ಜಿ. ಚೆಲುವ ರಂಗಪ್ಪ ಅವರು ಕೃಷಿ ಇಲಾಖೆಯಿಂದ ಕೃಷಿ, ಕೃಷಿಯೇತರ ಚಟುವಟಿಕೆಗಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ್ ಅವರು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ತೋಟಗಾರಿಕಾ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಎನ್ಆರ್ಎಲ್ಎಂ ಸಂಜೀವಿನಿ ತಾಲ್ಲೂಕು ಘಟಕದ ವ್ಯವಸ್ಥಾಪಕ ಜಗತ್ ಕೆ. ಅವರು, ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಯೂನಿಯನ್ ಬ್ಯಾಂಕ್ನಿಂದ ಸಿಗುವ ಸಾಲ ಸೌಲಭ್ಯ, ಬಡ್ಡಿ ರಿಯಾಯಿತಿ ಬಗ್ಗೆ ತಿಳಿಸಿದರು.</p>.<p>ರೈತರು, ಸ್ವಸಹಾಯ ಸಂಘಗಳಿಗೆ ₹9 ಕೋಟಿ ಅಧಿಕ ಮೊತ್ತದ ಸಾಲ ವಿತರಿಸಲಾಯಿತು. ಬ್ಯಾಂಕ್ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ದಿನೇಶ್ ಎಚ್.ಕೆ, ಕೃಷಿಕ ಸುರೇಶ್ ಬಲ್ನಾಡು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಕ್ಲಸ್ಟರ್ ವತಿಯಿಂದ ಮಹಾವೀರ ಸಭಾಂಗಣದಲ್ಲಿ ಕೃಷಿ ಅಭಿವೃದ್ಧಿ ಜನಸಂಪರ್ಕ ಶಿಬಿರ ಆಯೋಜಿಸಲಾಗಿತ್ತು.</p>.<p>ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ಸುನಿಲ್ ವಿ. ಪಾಟೀಲ ಉದ್ಘಾಟಿಸಿದರು. ಯೂನಿಯನ್ ಬ್ಯಾಂಕ್ನಿಂದ ರೈತರಿಗೆ, ಸ್ವಸಹಾಯ ಸಂಘಳಿಗೆ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಟಿ.ಜಿ. ಚೆಲುವ ರಂಗಪ್ಪ ಅವರು ಕೃಷಿ ಇಲಾಖೆಯಿಂದ ಕೃಷಿ, ಕೃಷಿಯೇತರ ಚಟುವಟಿಕೆಗಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ್ ಅವರು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ತೋಟಗಾರಿಕಾ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಎನ್ಆರ್ಎಲ್ಎಂ ಸಂಜೀವಿನಿ ತಾಲ್ಲೂಕು ಘಟಕದ ವ್ಯವಸ್ಥಾಪಕ ಜಗತ್ ಕೆ. ಅವರು, ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಯೂನಿಯನ್ ಬ್ಯಾಂಕ್ನಿಂದ ಸಿಗುವ ಸಾಲ ಸೌಲಭ್ಯ, ಬಡ್ಡಿ ರಿಯಾಯಿತಿ ಬಗ್ಗೆ ತಿಳಿಸಿದರು.</p>.<p>ರೈತರು, ಸ್ವಸಹಾಯ ಸಂಘಗಳಿಗೆ ₹9 ಕೋಟಿ ಅಧಿಕ ಮೊತ್ತದ ಸಾಲ ವಿತರಿಸಲಾಯಿತು. ಬ್ಯಾಂಕ್ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ದಿನೇಶ್ ಎಚ್.ಕೆ, ಕೃಷಿಕ ಸುರೇಶ್ ಬಲ್ನಾಡು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>