<p>ಪುತ್ತೂರು: ನಗರಸಭೆಯ ವಾರ್ಡ್ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಾಗ ಆ ವಾರ್ಡ್ನ ಸದಸ್ಯರ ಗಮನಕ್ಕೆ ತರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.</p>.<p>ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು.</p>.<p>ನಗರಸಭೆಯ 31 ವಾರ್ಡ್ಗಳಲ್ಲಿ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ತೆರವುಗೊಳಿಸುವ ಬಗ್ಗೆ ಅಂದಾಜು ಪಟ್ಟಿಯ ಅನುಮೋದನೆಗಾಗಿ ಸಭೆಯ ಗಮನಕ್ಕೆ ತರಲಾಯಿತು.ಸದಸ್ಯ ಭಾಮಿ ಅಶೋಕ ಶೆಣೈ ಅವರು ಈ ಕಾಮಗಾರಿಗೆ ₹13 ಲಕ್ಷ ಮೀಸಲಿಟ್ಟಿದ್ದು ಇದು ಸಾಕಾಗುವುದಿಲ್ಲ. ಇದನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯು ಚತುಷ್ಪಥ ರಸ್ತೆಯಾಗಿ ಪರಿತವರ್ತನೆಯಾಗುತ್ತಿದ್ದು, ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.</p>.<p>ವಾರದ ಸಂತೆ ರದ್ದು<br />ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ನಿಟ್ಟಿನಲ್ಲಿ ಅ.15ರಂದು ಸೋಮವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಆದಿನ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗಡೆ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸಬಾರದು. ಸಾರ್ವಜನಿಕರು ಸಹಕರಿಸುವಂತೆ ಅಧ್ಯಕ್ಷರು ಮನವಿ ಮಾಡಿದರು.</p>.<p>ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆ ಇದ್ದರು. ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ನಗರಸಭೆಯ ವಾರ್ಡ್ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಾಗ ಆ ವಾರ್ಡ್ನ ಸದಸ್ಯರ ಗಮನಕ್ಕೆ ತರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.</p>.<p>ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು.</p>.<p>ನಗರಸಭೆಯ 31 ವಾರ್ಡ್ಗಳಲ್ಲಿ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ತೆರವುಗೊಳಿಸುವ ಬಗ್ಗೆ ಅಂದಾಜು ಪಟ್ಟಿಯ ಅನುಮೋದನೆಗಾಗಿ ಸಭೆಯ ಗಮನಕ್ಕೆ ತರಲಾಯಿತು.ಸದಸ್ಯ ಭಾಮಿ ಅಶೋಕ ಶೆಣೈ ಅವರು ಈ ಕಾಮಗಾರಿಗೆ ₹13 ಲಕ್ಷ ಮೀಸಲಿಟ್ಟಿದ್ದು ಇದು ಸಾಕಾಗುವುದಿಲ್ಲ. ಇದನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯು ಚತುಷ್ಪಥ ರಸ್ತೆಯಾಗಿ ಪರಿತವರ್ತನೆಯಾಗುತ್ತಿದ್ದು, ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.</p>.<p>ವಾರದ ಸಂತೆ ರದ್ದು<br />ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ನಿಟ್ಟಿನಲ್ಲಿ ಅ.15ರಂದು ಸೋಮವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಆದಿನ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗಡೆ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸಬಾರದು. ಸಾರ್ವಜನಿಕರು ಸಹಕರಿಸುವಂತೆ ಅಧ್ಯಕ್ಷರು ಮನವಿ ಮಾಡಿದರು.</p>.<p>ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆ ಇದ್ದರು. ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>