<p><strong>ಪುತ್ತೂರು</strong>: ವರ್ಷದ ಹಿಂದೆ ಮದ್ಯ ಸೇವಿಸಿ ಬೈಕ್ ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿದ್ದ ಬೈಕ್ ಸವಾರ ಗಣೇಶ್ ನಾಯಕ್ ಎಂಬುವರಿಗೆ ಪುತ್ತೂರು ನ್ಯಾಯಾಲಯ ₹ 10ಸಾವಿರ ದಂಡ ವಿಧಿಸಿದೆ.</p>.<p>ಹೆಲ್ಮೆಟ್ ಧರಿಸದೆ ಗಣೇಶ್ ನಾಯಕ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕನ್ನು ತಡೆದು ತಪಾಸಣೆಗೊಳಪಡಿಸಿದಾಗ ಅವರು ಮದ್ಯ ಸೇವನೆ ಮಾಡಿರುವುದು ಕಂಡುಬಂದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.</p>.<p>ಪುತ್ತೂರಿನ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿರುವ ಪ್ರಕೃತಿ ಕಲ್ಯಾಣಪುರ ಅವರು ಪ್ರಕರಣದ ವಿಚಾರಣೆ ನಡೆಸಿ ಬೈಕ್ ಸವಾರನ ವಿರುದ್ಧದ ಆರೋಪ ಸಾಬೀತಾದ ಕಾರಣ ದಂಡ ವಿಧಿಸಿದ್ದಾರೆ. ಪ್ರಕರಣದ ಪರ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ವಾದಿಸಿದ್ದರು.</p>
<p><strong>ಪುತ್ತೂರು</strong>: ವರ್ಷದ ಹಿಂದೆ ಮದ್ಯ ಸೇವಿಸಿ ಬೈಕ್ ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿದ್ದ ಬೈಕ್ ಸವಾರ ಗಣೇಶ್ ನಾಯಕ್ ಎಂಬುವರಿಗೆ ಪುತ್ತೂರು ನ್ಯಾಯಾಲಯ ₹ 10ಸಾವಿರ ದಂಡ ವಿಧಿಸಿದೆ.</p>.<p>ಹೆಲ್ಮೆಟ್ ಧರಿಸದೆ ಗಣೇಶ್ ನಾಯಕ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕನ್ನು ತಡೆದು ತಪಾಸಣೆಗೊಳಪಡಿಸಿದಾಗ ಅವರು ಮದ್ಯ ಸೇವನೆ ಮಾಡಿರುವುದು ಕಂಡುಬಂದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.</p>.<p>ಪುತ್ತೂರಿನ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿರುವ ಪ್ರಕೃತಿ ಕಲ್ಯಾಣಪುರ ಅವರು ಪ್ರಕರಣದ ವಿಚಾರಣೆ ನಡೆಸಿ ಬೈಕ್ ಸವಾರನ ವಿರುದ್ಧದ ಆರೋಪ ಸಾಬೀತಾದ ಕಾರಣ ದಂಡ ವಿಧಿಸಿದ್ದಾರೆ. ಪ್ರಕರಣದ ಪರ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ವಾದಿಸಿದ್ದರು.</p>