ಪುತ್ತೂರು (ದಕ್ಷಿಣ ಕನ್ನಡ): ಕೃಷಿ ರಕ್ಷಣೆಗಾಗಿ ನೀಡಿದ್ದ ಕೋವಿಗಳನ್ನು ಚುನಾವಣೆ ಬಂದಾಗ ಪೊಲೀಸ್ ಠಾಣೆಯಲ್ಲಿ ಇಡುವ ಕ್ರಮ ಅರ್ಥಹೀನವಾಗಿದ್ದು ತೋಟಗಳಿಗೆ ಪ್ರಾಣಿಗಳಿಂದ ತೊಂದರೆಯಾದರೆ ತುರ್ತು ಸೇವೆ (112) ಸಂಖ್ಯೆಗೆ ಕರೆ ಮಾಡುವ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ರೈತಸಂಘ, ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ತಿಳಿಸಿದರು.