<p><strong>ಪುತ್ತೂರು</strong>: ಪುತ್ತೂರು ನವದುರ್ಗಾ ರಾಧನಾ ಸಮಿತಿ ವತಿಯಿಂದ 11 ದಿನಗಳಿಂದ ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ವಿಷ್ಣುಮೂರ್ತಿ -ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಪುತ್ತೂರು ದಸರಾ ಮಹೋತ್ಸವ ಶುಕ್ರವಾರ ಸಂಜೆ ಸಂಪನ್ನಗೊಂಡಿತು.</p>.<p>ಕ್ಷೇತ್ರದಲ್ಲಿ ಆರಾಧಿಸಿದ ಶಾರದೆ, ಗಣಪತಿ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾ ಯಾತ್ರೆ ಶುಕ್ರವಾರ ಸಂಜೆ ನಡೆಯಿತು.</p>.<p>ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದರ್ಬೆ ಅಶ್ವಿನಿ ವೃತ್ತದ ಬಳಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಸಂಪ್ಯ ಉದಯಗಿರಿಯಿಂದ ಆರಂಭಗೊಂಡು ಮಾಣಿ-ಮೈಸೂರು ಹೆದ್ದಾರಿಯಾಗಿ, ನಗರದ ಮುಖ್ಯ ರಸ್ತೆಯ ಮೂಲಕ ಬೊಳುವಾರು ತನಕ ನಡೆಯಿತು.</p>.<p>ಪುತ್ತೂರು ದಸರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ ಸುರೇಶ್ ಪುತ್ತೂರಾಯ ಮತ್ತು ಮಹಾಲಿಂಗೇಶ್ವರ ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.</p>.<p>ದಸರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಮಹೇಶ್ ಕಜೆ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಪರ್ಲಡ್ಕ, ಸಂಚಾಲಕ ಪ್ರೀತಂ ಪುತ್ತೂರಾಯ, ರಾಜೇಶ್ ಬನ್ನೂರು, ನಯನಾ ರೈ, ಲೋಕೇಶ್ ಹೆಗ್ಡೆ, ಮಹಾಬಲ ರೈ ವಳತ್ತಡ್ಕ ಇದ್ದರು.</p>.<p>ಸಂಪ್ಯದ ಉದಯಗಿರಿಯಿಂದ ಬೊಳುವಾರು ತನಕ ಸಾಗಿದ ಶೋಭಾಯಾತ್ರೆಯಲ್ಲಿ ಚೆಂಡೆವಾದನ, ಬ್ಯಾಂಡ್-ವಾಲಗ, ಚಲಿಸುವ ಸಂಗೀತ ರಸಮಂಜರಿ, ಸಿಂಹ ನೃತ್ಯ, ತೊಟ್ಟಿಲಿನಲ್ಲಿ ಕುಳಿತ ದುರ್ಗೆಯರ ಸ್ತಬ್ಧಚಿತ್ರ ವಿಶೇಷ ಆಕರ್ಷಣೆಗಳಾಗಿತ್ತು.</p>.<p>ಬೊಳುವಾರಿನಿಂದ ಹಿಂತಿರುಗಿದ ಶೋಭಾಯಾತ್ರೆಯು ಪುತ್ತೂರು ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಗೆ ಬಂದು, ಅಲ್ಲಿನ ಕೆರೆಯಲ್ಲಿ ವಿಗ್ರಹಗಳನ್ನು ಜಲಸ್ತಂಭನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಪುತ್ತೂರು ನವದುರ್ಗಾ ರಾಧನಾ ಸಮಿತಿ ವತಿಯಿಂದ 11 ದಿನಗಳಿಂದ ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ವಿಷ್ಣುಮೂರ್ತಿ -ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಪುತ್ತೂರು ದಸರಾ ಮಹೋತ್ಸವ ಶುಕ್ರವಾರ ಸಂಜೆ ಸಂಪನ್ನಗೊಂಡಿತು.</p>.<p>ಕ್ಷೇತ್ರದಲ್ಲಿ ಆರಾಧಿಸಿದ ಶಾರದೆ, ಗಣಪತಿ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾ ಯಾತ್ರೆ ಶುಕ್ರವಾರ ಸಂಜೆ ನಡೆಯಿತು.</p>.<p>ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದರ್ಬೆ ಅಶ್ವಿನಿ ವೃತ್ತದ ಬಳಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಸಂಪ್ಯ ಉದಯಗಿರಿಯಿಂದ ಆರಂಭಗೊಂಡು ಮಾಣಿ-ಮೈಸೂರು ಹೆದ್ದಾರಿಯಾಗಿ, ನಗರದ ಮುಖ್ಯ ರಸ್ತೆಯ ಮೂಲಕ ಬೊಳುವಾರು ತನಕ ನಡೆಯಿತು.</p>.<p>ಪುತ್ತೂರು ದಸರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ ಸುರೇಶ್ ಪುತ್ತೂರಾಯ ಮತ್ತು ಮಹಾಲಿಂಗೇಶ್ವರ ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.</p>.<p>ದಸರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಮಹೇಶ್ ಕಜೆ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಪರ್ಲಡ್ಕ, ಸಂಚಾಲಕ ಪ್ರೀತಂ ಪುತ್ತೂರಾಯ, ರಾಜೇಶ್ ಬನ್ನೂರು, ನಯನಾ ರೈ, ಲೋಕೇಶ್ ಹೆಗ್ಡೆ, ಮಹಾಬಲ ರೈ ವಳತ್ತಡ್ಕ ಇದ್ದರು.</p>.<p>ಸಂಪ್ಯದ ಉದಯಗಿರಿಯಿಂದ ಬೊಳುವಾರು ತನಕ ಸಾಗಿದ ಶೋಭಾಯಾತ್ರೆಯಲ್ಲಿ ಚೆಂಡೆವಾದನ, ಬ್ಯಾಂಡ್-ವಾಲಗ, ಚಲಿಸುವ ಸಂಗೀತ ರಸಮಂಜರಿ, ಸಿಂಹ ನೃತ್ಯ, ತೊಟ್ಟಿಲಿನಲ್ಲಿ ಕುಳಿತ ದುರ್ಗೆಯರ ಸ್ತಬ್ಧಚಿತ್ರ ವಿಶೇಷ ಆಕರ್ಷಣೆಗಳಾಗಿತ್ತು.</p>.<p>ಬೊಳುವಾರಿನಿಂದ ಹಿಂತಿರುಗಿದ ಶೋಭಾಯಾತ್ರೆಯು ಪುತ್ತೂರು ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಗೆ ಬಂದು, ಅಲ್ಲಿನ ಕೆರೆಯಲ್ಲಿ ವಿಗ್ರಹಗಳನ್ನು ಜಲಸ್ತಂಭನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>