ಸ್ಥಳೀಯರು ನೀಡಿದ ಮಾಹಿತಿಯಂತೆ ಪುತ್ತೂರು ಅಗ್ನಿಶಾಮಕ ಠಾಣಾಧಿಕಾರಿ ವಿ.ಸುಂದರ್ ಅವರ ನೇತೃತ್ವದ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಬಂದು ಬಾವಿಯಲ್ಲಿದ್ದ ದಂಪತಿಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದರು. ಪ್ರಮುಖ ಅಗ್ನಿಶಾಮಕ ರುಕ್ಮಯ್ಯ ಗೌಡ, ಸಿಬ್ಬಂದಿ ಮುಂಜುನಾಥ್, ಚಾಲಕ ಮೋಹನ್ ಜಾದವ್, ಗೃಹರಕ್ಷಕ ದಳದ ಚಂದ್ರಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.