ಪುತ್ತೂರಿನ ಆಟೊ ಚಾಲಕರಿಗೆ ಭಗವಧ್ವಜವನ್ನು ವಿತರಣೆ ಮಾಡುವ ಕೆಲಸವನ್ನು ಈಗಾಗಲೇ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆರಂಭಿಸಿದ್ದಾರೆ. ಜಾತ್ರೆಯ ನೆಪದಲ್ಲಿ ಅನ್ಯಧರ್ಮಿಯರು ಹಿಂದೂ ಹೆಣ್ಣುಮಕ್ಕಳನ್ನು ಮೋಸದ ಜಾಲದಲ್ಲಿ ಸಿಲುಕಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ ಎಂದು ಆರೋಪಿಸಿರುವ ಕಾರ್ಯಕರ್ತರು, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದಿಂದ ಹಿಂದೂಗಳಿಗೆ ಯಾವುದೇ ಸಹಾಯ ದೊರೆಯುತ್ತಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಕೆಲಸವಾಗುತ್ತಿರುವ ಕಾರಣ ಹಿಂದೂ ಸಮಾಜ ಇದೀಗ ತಾನೇ ಕಾರ್ಯಾಚರಣೆಗೆ ಇಳಿದಿದೆ ಎಂಬ ವಾದ ಮುಂದಿಟ್ಟಿದ್ದಾರೆ.