<p>ಪುತ್ತೂರು: ಇಬ್ಬರು ಮಹಿಳೆಯರೊಂದಿಗೆ ಬಂದ ಮೂವರ ತಂಡ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಮಳಿಗೆಯೊಂದರಿಂದ ಸುಮಾರು ₹ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು ಮಾಡಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ.</p>.<p>ನಗರದ ಹೆಗ್ಡೆ ಆರ್ಕೇಡ್ನಲ್ಲಿರುವ ‘ಆರ್.ಕೆ.ಜ್ಯುವೆಲ್ಲರ್ಸ್’ ಚಿನ್ನಾಭರಣ ಮಳಿಗೆಯಲ್ಲಿ ಕಳವು ನಡೆದಿದೆ. ಘಟನೆಗೆ ಸಂಬಂಧಿಸಿ ಮಳಿಗೆಯ ಮಾಲೀಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಮಾರ್ಚ್ 30ರಂದು ವಿವಿಧ ವಿನ್ಯಾಸದ ಆಭರಣಗಳನ್ನು ತೋರಿಸುವಂತೆ ಮೂವರು ಅಪರಿಚಿತರು ಹೇಳಿದ್ದರು. ಅವರು ತಿಳಿಸಿದಂತೆ ಹಲವು ವಿನ್ಯಾಸದ ಬೇರೆ ಬೇರೆ ಚಿನ್ನದ ಬಳೆಗಳನ್ನು ತೋರಿಸಲಾಗಿತ್ತು. ಗ್ರಾಹಕರ ಸೋಗಿನಲ್ಲಿ ಬಂದಿದ್ದ ಅವರು ಆಭರಣ ಖರೀದಿಸದೆ ತೆರಳಿದ್ದರು. ಆ ಬಳಿಕ ಪರಿಶೀಲಿಸಿದಾಗ ಅಂದಾಜು 23 ಗ್ರಾಂ ತೂಕದ ಚಿನ್ನದ ಬಳೆಯೊಂದು ಕಳವಾಗಿರುವುದು ಗೊತ್ತಾಗಿದೆ ಎಂದು ಕೃಷ್ಣತ್ ನಾಮದೇವ್ ಸುರ್ವೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-29-6850539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಇಬ್ಬರು ಮಹಿಳೆಯರೊಂದಿಗೆ ಬಂದ ಮೂವರ ತಂಡ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಮಳಿಗೆಯೊಂದರಿಂದ ಸುಮಾರು ₹ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು ಮಾಡಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ.</p>.<p>ನಗರದ ಹೆಗ್ಡೆ ಆರ್ಕೇಡ್ನಲ್ಲಿರುವ ‘ಆರ್.ಕೆ.ಜ್ಯುವೆಲ್ಲರ್ಸ್’ ಚಿನ್ನಾಭರಣ ಮಳಿಗೆಯಲ್ಲಿ ಕಳವು ನಡೆದಿದೆ. ಘಟನೆಗೆ ಸಂಬಂಧಿಸಿ ಮಳಿಗೆಯ ಮಾಲೀಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಮಾರ್ಚ್ 30ರಂದು ವಿವಿಧ ವಿನ್ಯಾಸದ ಆಭರಣಗಳನ್ನು ತೋರಿಸುವಂತೆ ಮೂವರು ಅಪರಿಚಿತರು ಹೇಳಿದ್ದರು. ಅವರು ತಿಳಿಸಿದಂತೆ ಹಲವು ವಿನ್ಯಾಸದ ಬೇರೆ ಬೇರೆ ಚಿನ್ನದ ಬಳೆಗಳನ್ನು ತೋರಿಸಲಾಗಿತ್ತು. ಗ್ರಾಹಕರ ಸೋಗಿನಲ್ಲಿ ಬಂದಿದ್ದ ಅವರು ಆಭರಣ ಖರೀದಿಸದೆ ತೆರಳಿದ್ದರು. ಆ ಬಳಿಕ ಪರಿಶೀಲಿಸಿದಾಗ ಅಂದಾಜು 23 ಗ್ರಾಂ ತೂಕದ ಚಿನ್ನದ ಬಳೆಯೊಂದು ಕಳವಾಗಿರುವುದು ಗೊತ್ತಾಗಿದೆ ಎಂದು ಕೃಷ್ಣತ್ ನಾಮದೇವ್ ಸುರ್ವೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-29-6850539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>