<p>ಪುತ್ತೂರು (ದಕ್ಷಿಣ ಕನ್ನಡ): ಫೋನ್ ಕರೆ ಸಂಭಾಷಣೆ ವೇಳೆ ರಂಗಭೂಮಿ, ತುಳುಚಿತ್ರ ಕಲಾವಿದರೊಬ್ಬರ ಬಗ್ಗೆ ಕೀಳು ಮಟ್ಟದ ಶಬ್ಧಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ ಆರೋಪದಡಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಮಂದಾರ ನಿವಾಸಿ, ರಂಗಭೂಮಿ ಕಲಾವಿದ ಸುಂದರ ರೈ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.</p>.<p>‘ಸ್ನೇಹಿತ ದಿನೇಶ್ ಕೊಡಪದವು ಅವರು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ ಧ್ವನಿ ಮುದ್ರಿಕೆಯನ್ನು ಏಪ್ರಿಲ್ 12ರಂದು ಕೇಳಿದ್ದು, ಅದರಲ್ಲಿ ಗುರುವಾಯನಕೆರೆ ಪ್ರಜ್ವಲ್ ಹಾಗೂ ಮಹೇಶ್ ಶೆಟ್ಟಿ ನಡುವಿನ ಫೋನ್ ಸಂಭಾಷಣೆ ಅದಾಗಿದೆ. ಈ ಸಂಭಾಷಣೆಯಲ್ಲಿ ಮಹೇಶ್ ಶೆಟ್ಟಿ ಅವರು ದಿನೇಶ್ ಕೊಡಪದವು ಹಾಗೂ ಮಂದಾರ ಸುಂದರ್ ರೈ ಹೆಸರು ಪ್ರಸ್ತಾಪಿಸಿ ಕೀಳು ಮಟ್ಟದ ಪದಗಳಿಂದ ನಿಂದಿಸಿ ಅವಹೇಳನ ಮಾಡಿ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಅಲ್ಲದೇ ತನ್ನ ತಾಯಿ-ಪತ್ನಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಕೆಟ್ಟದಾಗಿ ಮಾತನಾಡಿ ತೇಜೋವಧೆ ಮಾಡಿದ್ದಾರೆ. ನನ್ನ ಹೆಸರು ಉಲ್ಲೇಖಿಸಿ ಜೀವ ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ಜಾತಿ ವೈಷಮ್ಯ, ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುವಂತೆ ಕುಮ್ಮಕ್ಕು ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-29-1070535674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು (ದಕ್ಷಿಣ ಕನ್ನಡ): ಫೋನ್ ಕರೆ ಸಂಭಾಷಣೆ ವೇಳೆ ರಂಗಭೂಮಿ, ತುಳುಚಿತ್ರ ಕಲಾವಿದರೊಬ್ಬರ ಬಗ್ಗೆ ಕೀಳು ಮಟ್ಟದ ಶಬ್ಧಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ ಆರೋಪದಡಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಮಂದಾರ ನಿವಾಸಿ, ರಂಗಭೂಮಿ ಕಲಾವಿದ ಸುಂದರ ರೈ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.</p>.<p>‘ಸ್ನೇಹಿತ ದಿನೇಶ್ ಕೊಡಪದವು ಅವರು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ ಧ್ವನಿ ಮುದ್ರಿಕೆಯನ್ನು ಏಪ್ರಿಲ್ 12ರಂದು ಕೇಳಿದ್ದು, ಅದರಲ್ಲಿ ಗುರುವಾಯನಕೆರೆ ಪ್ರಜ್ವಲ್ ಹಾಗೂ ಮಹೇಶ್ ಶೆಟ್ಟಿ ನಡುವಿನ ಫೋನ್ ಸಂಭಾಷಣೆ ಅದಾಗಿದೆ. ಈ ಸಂಭಾಷಣೆಯಲ್ಲಿ ಮಹೇಶ್ ಶೆಟ್ಟಿ ಅವರು ದಿನೇಶ್ ಕೊಡಪದವು ಹಾಗೂ ಮಂದಾರ ಸುಂದರ್ ರೈ ಹೆಸರು ಪ್ರಸ್ತಾಪಿಸಿ ಕೀಳು ಮಟ್ಟದ ಪದಗಳಿಂದ ನಿಂದಿಸಿ ಅವಹೇಳನ ಮಾಡಿ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಅಲ್ಲದೇ ತನ್ನ ತಾಯಿ-ಪತ್ನಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಕೆಟ್ಟದಾಗಿ ಮಾತನಾಡಿ ತೇಜೋವಧೆ ಮಾಡಿದ್ದಾರೆ. ನನ್ನ ಹೆಸರು ಉಲ್ಲೇಖಿಸಿ ಜೀವ ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ಜಾತಿ ವೈಷಮ್ಯ, ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುವಂತೆ ಕುಮ್ಮಕ್ಕು ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-29-1070535674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>