<p><strong>ಪುತ್ತೂರು</strong>: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಪಾವತಿಗೆ ಬಾಕಿ ಇರುವ ವಿಟ್ಲ ಮತ್ತು ಬಲ್ನಾಡು ಗ್ರಾಮದ ರೈತರಿಗೆ ಶೀಘ್ರವಾಗಿ ಬೆಳೆವಿಮೆ ಮಂಜೂರಾಗಲಿದೆ. ಸಮರ್ಪಕವಾಗಿ ಕಾರ್ಯನಿರ್ವಹಿಸದ ಮಳೆಮಾಪಕಗಳನ್ನು ದುರಸ್ತಿಗೊಳಿಸುವ, ಅಥವಾ ಹೊಸ ಮಳೆಮಾಪನ ಅಳವಡಿಸುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಈ ಬಗ್ಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.</p>.<p>ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ ಲೋಪವಾಗಿರುವ ಕುರಿತು ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಮಂಗಳವಾರ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶಕೀಲ್ ಅಹ್ಮದ್ ಜತೆ ಸಭೆ ನಡೆಸಿದ ಬಳಿಕ ಶಾಸಕ ಅಶೋಕ್ ರೈ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಕೋಡಿಂಬಾಡಿ, ಕೊಡಿಪ್ಪಾಡಿ, ವಿಟ್ಲ ಹಾಗೂ ಬಲ್ನಾಡು ಗ್ರಾಮದ ರೈತರಿಗೆ ಕಾಳುಮೆಣಸು ವಿಮೆ ಮಾತ್ರ ಮಂಜೂರಾಗಿದೆ. ಅಡಿಕೆ ಬೆಳೆ ವಿಮೆ ಮಂಜೂರಾಗಿರಲಿಲ್ಲ, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಪೈಕಿ ಕೊಡಿಪ್ಪಾಡಿ ಮತ್ತು ಕೋಡಿಂಬಾಡಿ ಗ್ರಾಮದ ರೈತರಿಗೆ ವಿಮಾ ಪರಿಹಾರ ಹಣ ಮಂಜೂರಾಗಿದ್ದು, ರೈತರ ಖಾತೆಗಳಿಗೆ ಜಮೆಯಾಗಲಿದೆ. ವಿಟ್ಲ ಮತ್ತು ಬಲ್ನಾಡು ಗ್ರಾಮದ ರೈತರಿಗೆ ಶೀಘ್ರದಲ್ಲೇ ವಿಮಾ ಪರಿಹಾರ ಮೊತ್ತ ಮಂಜೂರಾಗಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ವಿಮಾ ಕಂತು ಪಾವತಿ ಮಾಡಿದವರ ಪೈಕಿ 6ಸಾವಿರ ಮಂದಿಯ ಖಾತೆಗಳಿಗೆ ಕೆವೈಸಿಯಾಗದ ಕಾರಣ ಅವರಿಗೆ ವಿಮಾ ಕಂಪನಿಯಿಂದ ವಿಮೆ ಪಾವತಿಯಾಗಿಲ್ಲ. ಜಮೆಯಾಗದ ಈ ಖಾತೆಗಳಿಗೆ ಸಂಬಂಧಿಸಿ ಕ್ರಮ ಕೈಗೊಳ್ಳುವ ಬಗ್ಗೆ ಇನ್ನೊಂದು ಹಂತದ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಪಾವತಿಗೆ ಬಾಕಿ ಇರುವ ವಿಟ್ಲ ಮತ್ತು ಬಲ್ನಾಡು ಗ್ರಾಮದ ರೈತರಿಗೆ ಶೀಘ್ರವಾಗಿ ಬೆಳೆವಿಮೆ ಮಂಜೂರಾಗಲಿದೆ. ಸಮರ್ಪಕವಾಗಿ ಕಾರ್ಯನಿರ್ವಹಿಸದ ಮಳೆಮಾಪಕಗಳನ್ನು ದುರಸ್ತಿಗೊಳಿಸುವ, ಅಥವಾ ಹೊಸ ಮಳೆಮಾಪನ ಅಳವಡಿಸುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಈ ಬಗ್ಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.</p>.<p>ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ ಲೋಪವಾಗಿರುವ ಕುರಿತು ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಮಂಗಳವಾರ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶಕೀಲ್ ಅಹ್ಮದ್ ಜತೆ ಸಭೆ ನಡೆಸಿದ ಬಳಿಕ ಶಾಸಕ ಅಶೋಕ್ ರೈ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಕೋಡಿಂಬಾಡಿ, ಕೊಡಿಪ್ಪಾಡಿ, ವಿಟ್ಲ ಹಾಗೂ ಬಲ್ನಾಡು ಗ್ರಾಮದ ರೈತರಿಗೆ ಕಾಳುಮೆಣಸು ವಿಮೆ ಮಾತ್ರ ಮಂಜೂರಾಗಿದೆ. ಅಡಿಕೆ ಬೆಳೆ ವಿಮೆ ಮಂಜೂರಾಗಿರಲಿಲ್ಲ, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಪೈಕಿ ಕೊಡಿಪ್ಪಾಡಿ ಮತ್ತು ಕೋಡಿಂಬಾಡಿ ಗ್ರಾಮದ ರೈತರಿಗೆ ವಿಮಾ ಪರಿಹಾರ ಹಣ ಮಂಜೂರಾಗಿದ್ದು, ರೈತರ ಖಾತೆಗಳಿಗೆ ಜಮೆಯಾಗಲಿದೆ. ವಿಟ್ಲ ಮತ್ತು ಬಲ್ನಾಡು ಗ್ರಾಮದ ರೈತರಿಗೆ ಶೀಘ್ರದಲ್ಲೇ ವಿಮಾ ಪರಿಹಾರ ಮೊತ್ತ ಮಂಜೂರಾಗಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ವಿಮಾ ಕಂತು ಪಾವತಿ ಮಾಡಿದವರ ಪೈಕಿ 6ಸಾವಿರ ಮಂದಿಯ ಖಾತೆಗಳಿಗೆ ಕೆವೈಸಿಯಾಗದ ಕಾರಣ ಅವರಿಗೆ ವಿಮಾ ಕಂಪನಿಯಿಂದ ವಿಮೆ ಪಾವತಿಯಾಗಿಲ್ಲ. ಜಮೆಯಾಗದ ಈ ಖಾತೆಗಳಿಗೆ ಸಂಬಂಧಿಸಿ ಕ್ರಮ ಕೈಗೊಳ್ಳುವ ಬಗ್ಗೆ ಇನ್ನೊಂದು ಹಂತದ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>