<p>ಪುತ್ತೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 4 ಮಸೀದಿ ಹಾಗೂ ಮದ್ರಸಗಳ ನವೀಕರಣ, ದುರಸ್ತಿಗೆ ವಕ್ಫ್ ಇಲಾಖೆಯಿಂದ ₹75 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.</p>.<p>ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಹಾಗೂ ಖುವ್ವತ್ತುಲ್ ಇಸ್ಲಾಂ ಮದ್ರಸದ ಅಭಿವೃದ್ಧಿ ಕಾಮಗಾರಿಗೆ ₹20 ಲಕ್ಷ, ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿ ದುರಸ್ತಿ, ನವೀಕರಣಕ್ಕೆ ₹15 ಲಕ್ಷ, ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿಯ ದುರಸ್ತಿ ಮತ್ತು ನವೀಕರಣಕ್ಕೆ ₹15 ಲಕ್ಷ, ಪುತ್ತೂರು ಅನ್ಸರುದ್ದೀನ್ ಜಮಾಅತ್ ಕಮಿಟಿಯ ಅಧೀನದಲ್ಲಿರುವ ಸಾಲ್ಮರ ಸಯ್ಯದ್ ಮಲೆ ಜುಮಾ ಮಸೀದಿ, ಮಿಸ್ಬಾಹುಲ್ ಹುದಾ ಮದ್ರಸ ಕಟ್ಟಡ ದುರಸ್ತಿಗೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಈ ನಾಲ್ಕು ಮಸೀದಿಗಳ ಪ್ರಮುಖರು ಅನುದಾನ ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಬೇಡಿಕೆ ಈಡೇರಿಸುವ ಕೆಲಸ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-29-1284750639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 4 ಮಸೀದಿ ಹಾಗೂ ಮದ್ರಸಗಳ ನವೀಕರಣ, ದುರಸ್ತಿಗೆ ವಕ್ಫ್ ಇಲಾಖೆಯಿಂದ ₹75 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.</p>.<p>ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಹಾಗೂ ಖುವ್ವತ್ತುಲ್ ಇಸ್ಲಾಂ ಮದ್ರಸದ ಅಭಿವೃದ್ಧಿ ಕಾಮಗಾರಿಗೆ ₹20 ಲಕ್ಷ, ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿ ದುರಸ್ತಿ, ನವೀಕರಣಕ್ಕೆ ₹15 ಲಕ್ಷ, ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿಯ ದುರಸ್ತಿ ಮತ್ತು ನವೀಕರಣಕ್ಕೆ ₹15 ಲಕ್ಷ, ಪುತ್ತೂರು ಅನ್ಸರುದ್ದೀನ್ ಜಮಾಅತ್ ಕಮಿಟಿಯ ಅಧೀನದಲ್ಲಿರುವ ಸಾಲ್ಮರ ಸಯ್ಯದ್ ಮಲೆ ಜುಮಾ ಮಸೀದಿ, ಮಿಸ್ಬಾಹುಲ್ ಹುದಾ ಮದ್ರಸ ಕಟ್ಟಡ ದುರಸ್ತಿಗೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಈ ನಾಲ್ಕು ಮಸೀದಿಗಳ ಪ್ರಮುಖರು ಅನುದಾನ ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಬೇಡಿಕೆ ಈಡೇರಿಸುವ ಕೆಲಸ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-29-1284750639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>