<p>ಪುತ್ತೂರು: ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿ ವೈದ್ಯರು ನೀಡುವ ನೋವು ನಿವಾರಕ ಮಾತ್ರೆಗಳನ್ನು ಕೆಲವರು ವೈದ್ಯರ ಸಲಹೆ ಇಲ್ಲದೆಯೇ ಬಳಕೆ ಮಾಡುತ್ತಿದ್ದು, ಇದರಿಂದ ಉಂಟಾಗುವ ಅಪಾಯದ ಬಗ್ಗೆ ಅರಿವು ಮೂಡಿಸಲು ‘ಪೇನ್ಕಿಲ್ಲರ್ ತ್ಯಜಿಸಿ... ಕಿಡ್ನಿ ರಕ್ಷಿಸಿ- ಜೀವ ಉಳಿಸಿ’ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.</p>.<p>ಈ ಜಾಗೃತಿ ಕಾರ್ಯಕ್ರಮ ನಿರಂತರವಾಗಿ ಸಾಗಲಿದ್ದು, ಪ್ರತಿ 6 ತಿಂಗಳಿಗೊಮ್ಮೆ ಜಾಗೃತಿ ಶಿಬಿರ ನಡೆಸ ಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದರು.</p>.<p>ನಗರದಲ್ಲಿ ಸೋಮವಾರ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮೂರು ತಿಂಗಳ ಹಿಂದೆ ಪುತ್ತೂರಿನಲ್ಲಿ ಡಯಾಲಿಸಿಸ್ ಮಾಡಿಸಲು 180 ಮಂದಿ ಸರ್ಕಾರಿ ಆಸ್ಪತ್ರೆ ಬರುತ್ತಿದ್ದರು. ಈಗ ಈ ಸಂಖ್ಯೆ 208ಕ್ಕೆ ತಲುಪಿದೆ. ಬಹುತೇಕ ಈ ಕಿಡ್ನಿ ವೈಫಲ್ಯಕ್ಕೆ ನೋವು ನಿವಾರಕ ಮಾತ್ರೆ ಕಾರಣವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಯಾರೂ ಇದನ್ನು ಬಳಕೆ ಮಾಡಬಾರದು. ಈ ನಿಟ್ಟಿನಲ್ಲಿ ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದು ಅವರು ಹೇಳಿದರು.</p>.<p>ಜಾಗೃತಿ ಜಾಥಾ ಬೊಳುವಾರುವರೆಗೆ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದುರಾಜ್, ವೈದ್ಯರಾದ ಡಾ. ಹೇಮಲತಾ, ಡಾ. ದೀಪಿಕಾ, ಡಾ. ರಾಧಿಕಾ, ಗ್ಯಾರಂಟಿ ಅನುಷ್ಠಾನ ಪುತ್ತೂರು ತಾಲ್ಲೂಕು ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಅಕ್ರಮ–ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಜಯಪ್ರಕಾಶ್ ಬದಿನಾರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-29-1211193094</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿ ವೈದ್ಯರು ನೀಡುವ ನೋವು ನಿವಾರಕ ಮಾತ್ರೆಗಳನ್ನು ಕೆಲವರು ವೈದ್ಯರ ಸಲಹೆ ಇಲ್ಲದೆಯೇ ಬಳಕೆ ಮಾಡುತ್ತಿದ್ದು, ಇದರಿಂದ ಉಂಟಾಗುವ ಅಪಾಯದ ಬಗ್ಗೆ ಅರಿವು ಮೂಡಿಸಲು ‘ಪೇನ್ಕಿಲ್ಲರ್ ತ್ಯಜಿಸಿ... ಕಿಡ್ನಿ ರಕ್ಷಿಸಿ- ಜೀವ ಉಳಿಸಿ’ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.</p>.<p>ಈ ಜಾಗೃತಿ ಕಾರ್ಯಕ್ರಮ ನಿರಂತರವಾಗಿ ಸಾಗಲಿದ್ದು, ಪ್ರತಿ 6 ತಿಂಗಳಿಗೊಮ್ಮೆ ಜಾಗೃತಿ ಶಿಬಿರ ನಡೆಸ ಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದರು.</p>.<p>ನಗರದಲ್ಲಿ ಸೋಮವಾರ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮೂರು ತಿಂಗಳ ಹಿಂದೆ ಪುತ್ತೂರಿನಲ್ಲಿ ಡಯಾಲಿಸಿಸ್ ಮಾಡಿಸಲು 180 ಮಂದಿ ಸರ್ಕಾರಿ ಆಸ್ಪತ್ರೆ ಬರುತ್ತಿದ್ದರು. ಈಗ ಈ ಸಂಖ್ಯೆ 208ಕ್ಕೆ ತಲುಪಿದೆ. ಬಹುತೇಕ ಈ ಕಿಡ್ನಿ ವೈಫಲ್ಯಕ್ಕೆ ನೋವು ನಿವಾರಕ ಮಾತ್ರೆ ಕಾರಣವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಯಾರೂ ಇದನ್ನು ಬಳಕೆ ಮಾಡಬಾರದು. ಈ ನಿಟ್ಟಿನಲ್ಲಿ ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದು ಅವರು ಹೇಳಿದರು.</p>.<p>ಜಾಗೃತಿ ಜಾಥಾ ಬೊಳುವಾರುವರೆಗೆ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದುರಾಜ್, ವೈದ್ಯರಾದ ಡಾ. ಹೇಮಲತಾ, ಡಾ. ದೀಪಿಕಾ, ಡಾ. ರಾಧಿಕಾ, ಗ್ಯಾರಂಟಿ ಅನುಷ್ಠಾನ ಪುತ್ತೂರು ತಾಲ್ಲೂಕು ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಅಕ್ರಮ–ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಜಯಪ್ರಕಾಶ್ ಬದಿನಾರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-29-1211193094</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>