ಪುತ್ತೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಸತೀಶ್ ಕುಮಾರ್ ಕೆಡೆಂಜಿ ಅವರು, ‘ಪ್ರವೀಣ್ ಹತ್ಯೆಗೆ ಸಂಬಂಧಿಸಿದ ನೈಜ ಆರೋಪಿಗಳನ್ನು ಹಾಗೂ ಈ ಹತ್ಯೆಯ ಹಿಂದೆ ಇರುವವರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ನ್ಯಾಯ ಸಿಗದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಲ್ಲವ ಸಮಾಜ, ಸಂಘಟನೆ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.